
ಜಾಲಹಳ್ಳಿ: ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಭಾನುವಾರ ಸಂಜೆ ‘ವೋಟ್ ಚೋರ್, ಗದ್ದಿ ಚೋಡ್’ ಎಂಬ ವಿನೂತನ ಕ್ಯಾಂಡಲ್ ಹಿಡಿದು ಪ್ರತಿಭಟನೆ ಮಾಡಿದರು. ರಂಗನಾಥ ದೇವಸ್ಥಾನದಿಂದ ಅಂಬೇಡ್ಕರ್ ವೃತ್ತವರೆಗೆ ಮೆರವಣಿಗೆ ನಡೆಸಿದರು.
ಕಾಂಗ್ರೆಸ್ ಮುಖಂಡ ರಾಜಾವಾಸುದೇವ ನಾಯಕ ಮಾತನಾಡಿ, ‘11 ವರ್ಷಗಳಿಂದ ಕೇಂದ್ರದಲ್ಲಿ ಅಡಳಿತ ನಡೆಸುತ್ತಿರುವ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಡವರ ಪರವಾಗಿಲ್ಲ. ಸುಳ್ಳು ಹೇಳುವುದರಲ್ಲಿ ಕಾಲ ಕಳೆಯುತ್ತಿದೆ. ಬಿಜೆಪಿಯ ಹಿಂದಿನ ಇತಿಹಾಸ ಕೂಡ ಪ್ರತಿಯೊಬ್ಬರೂ ಪರಿಶೀಲನೆ ಮಾಡಬೇಕು. ಹೀಗಾಗಿಯೇ ಕಾಂಗ್ರೆಸ್ ಪಕ್ಷದಿಂದ ರಾಷ್ಟ್ರ ಮಟ್ಟದ ವಿನೂತನ ಪ್ರತಿಭಟನೆ ಹಮ್ಮಿಕೊಂಡಿದೆ’ ಎಂದು ಹೇಳಿದರು.
ಜಿ.ಪಂ. ಮಾಜಿ ಸದಸ್ಯ ಬಸವರಾಜ ಪಂಪಾಪತಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಅಯ್ಯಪ್ಪ ಸ್ವಾಮಿ, ವೇಣುಗೋಪಾಲಗೌಡ, ಮುದ್ದರಂಗಪ್ಪ ತೊಗರಿ, ರಂಗನಾಥ ಕುದರಿ, ಹುಸೇನ್ ಸಾಬ್ ನಾಸಿ ಸೇರಿದಂತೆ ಅನೇಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.