ADVERTISEMENT

JCB ಹರಿದು ಗಾಢ ನಿದ್ರೆಯಲ್ಲಿದ್ದ ಮೂರು ಯುವಕರು ಸಾವು: ಬೋರ್‌ವೆಲ್ ಕೊರೆಯಲು ಬಂದಿದ್ದರು

ರಾಯಚೂರು ಜಿಲ್ಲೆಯ ದೇವದುರ್ಗ ಸಮೀಪದ ಜಾಲಹಳ್ಳಿಯ ನಿಲವಂಜಿ ಗ್ರಾಮದಲ್ಲಿ‌ ಘಟನೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2023, 6:11 IST
Last Updated 14 ಜೂನ್ 2023, 6:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಜಾಲಹಳ್ಳಿ (ರಾಯಚೂರು ಜಿಲ್ಲೆ): ಸಮೀಪದ ನಿಲವಂಜಿ ಗ್ರಾಮದಲ್ಲಿ‌ ಮಂಗಳವಾರ ರಾತ್ರಿ‌ ಕೊಳವೆ‌ಬಾವಿ ಕೊರೆಯುವ ಯಂತ್ರದಲ್ಲಿ ಕೆಲಸ‌ ಮಾಡುವ ಮೂವರು ಯುವಕರು ಗಾಢ ನಿದ್ರೆಯಲ್ಲಿದ್ದಾಗ ಅವರ ಮೇಲೆ ಜೆಸಿಬಿ ಯಂತ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತಪಟ್ಟವರನ್ನು ಛತ್ತೀಸ್‌ಗಢ ಮೂಲದ ಕೃಷ್ಣಾ(25) ಶಿವುರಾಮ(30), ಬಲರಾಮ(28) ಎಂದು ಗುರುತಿಸಲಾಗಿದೆ.

ಬೋರ್‌ವೆಲ್ ಕೆಲಸ ಮುಗಿಸಿಕೊಂಡು ಜಮೀನಿನಲ್ಲೇ ಮಲಗಿದ್ದ ವೇಳೆ ಈ ದುರಂತ ನಡೆದಿದೆ.

ADVERTISEMENT

ನಿಲುಂಜಿ ಗ್ರಾಮದ ನಿವಾಸಿಯಾದ ಬಾಲಯ್ಯ ಎಂಬುವರಿಗೆ ಸೇರಿದ್ದ ಜೆಸಿಬಿ ಯಂತ್ರವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ

ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪಿಐ ವನಕೇರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.