ADVERTISEMENT

‘ಅನ್ಯ ಭಾಷೆ ವ್ಯಾಮೋಹ ಬಿಡಿ’

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 11:58 IST
Last Updated 1 ನವೆಂಬರ್ 2021, 11:58 IST
ಹಟ್ಟಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖಂಡ ಗುಂಡಪ್ಪಗೌಡ ಪೊಲೀಸ್ ಪಾಟೀಲ ಮಾತನಾಡಿದರು
ಹಟ್ಟಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖಂಡ ಗುಂಡಪ್ಪಗೌಡ ಪೊಲೀಸ್ ಪಾಟೀಲ ಮಾತನಾಡಿದರು   

ಹಟ್ಟಿಚಿನ್ನದಗಣಿ: ‘ಕನ್ನಡಿಗರು ಅನ್ಯ ಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಬೆಳೆಸಬೇಕು’ ಎಂದು ಹಟ್ಟಿ ಪಟ್ಟಣದ ಹಿರಿಯ ಮುಖಂಡ ಗುಂಡಪ್ಪಗೌಡ ಪೊಲೀಸ್ ಪಾಟೀಲ ಸಲಹೆ ನೀಡಿದರು.

ಹಟ್ಟಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಕರುನಾಡ ವಿಜಯಸೇನೆ, ಕರವೇ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ಮಾತನಾಡಿದರು.

ಮಾತೃಭಾಷೆ, ನಾಡು ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಯುವಕರ ಕೈಯಲ್ಲಿದೆ. ಸರ್ಕಾರ ಕೇಂದ್ರ ಸರ್ಕಾರದ ಹುದ್ದೆಗಳಿಗೆ ನೇಮಕ ಮಾಡುವಾಗ ಕನ್ನಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಕನ್ನಡ ಭಾಷೆ ಉಳಿಯಬೇಕಾದರೆ, ಸಂಘಟನೆಗಳು ಬಲಗೊಳ್ಳಬೇಕಿದೆ ಎಂದರು.

ADVERTISEMENT

ಕರುನಾಡ ವಿಜಯಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ.ಚಂದ್ರಶೇಖರ ನಾಯಕ, ನರಸಪ್ಪ ಯಾದವ ಹಾಗೂ ಹನುಮಂತರೆಡ್ಡಿ ಮಾತನಾಡಿದರು.

ಹಟ್ಟಿ ಠಾಣೆಯ ಪಿಎಸ್ಐ ರಾಮಲಿಂಗಪ್ಪ, ಕೆ.ವಿ. ಕಳ್ಳಿಮಠ, ಮೌನೇಶ ಕಾಕಾಮಗರ, ಬುಜ್ಜನಾಯಕ, ಮಾಸ್ಟರ್ ಗುಂಡಪ್ಪಗೌಡ ಗುರಿಕಾರ, ವೈದ್ಯರಾದ ಲಕ್ಷ್ಮಿಕಾಂತ, ಮಹೇಂದ್ರ, ಶೇಖ್ ಹುಸೇನ್ ಸೌದಾಗಾರ್, ಪಿಡಿಒ ಬಸವಾರಾಜ, ಶ್ರೀನಿವಾಸ, ಕರುನಾಡ ವಿಜಯಸೇನೆ ಹಟ್ಟಿ ಘಟಕದ ಅಧ್ಯಕ್ಷ ಸಿದ್ದು ಮುದುಗಲ್ ಸೇರಿದಂತೆ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.