ADVERTISEMENT

ಕವಿತಾಳ: ಕರಿಯಪ್ಪ ತಾತನ ರಥೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2024, 15:24 IST
Last Updated 10 ಆಗಸ್ಟ್ 2024, 15:24 IST
ಕವಿತಾಳ ಸಮೀಪದ ಹಾಲಾಪುರದಲ್ಲಿ ಕರಿಯಪ್ಪ ತಾತನ ಜಾತ್ರೆ ನಿಮಿತ್ತ ಶುಕ್ರವಾರ ರಥೋತ್ಸವ ಅದ್ದೂರಿಯಾಗಿ ಜರುಗಿತು
ಕವಿತಾಳ ಸಮೀಪದ ಹಾಲಾಪುರದಲ್ಲಿ ಕರಿಯಪ್ಪ ತಾತನ ಜಾತ್ರೆ ನಿಮಿತ್ತ ಶುಕ್ರವಾರ ರಥೋತ್ಸವ ಅದ್ದೂರಿಯಾಗಿ ಜರುಗಿತು   

ಕವಿತಾಳ: ಸಮೀಪದ ಹಾಲಾಪುರ ಗ್ರಾಮದ ಕರಿಯಪ್ಪ ತಾತನ ಜಾತ್ರೆ ನಿಮಿತ್ತ ಶುಕ್ರವಾರ ರಥೋತ್ಸವ ಅದ್ದೂರಿಯಾಗಿ ಜರುಗಿತು.

ಜಾತ್ರೆ ಅಂಗವಾಗಿ ಕರಿಯಪ್ಪ ತಾತನ ಗದ್ದುಗೆಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಬಸವರಾಜಸ್ವಾಮಿ, ಶಿವಕುಮಾರಸ್ವಾಮಿ, ಮಲ್ಲಯ್ಯಸ್ವಾಮಿ, ನಾಗೇಶ ನಾಯಕ ಪೂಜಾರಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಐದು ದಿನಗಳಿಂದ ನಡೆದ ಕರಿಯಪ್ಪ ತಾತನ ಲೀಲಾಮೃತ ಪುರಾಣ ಪ್ರವಚನದ ಮಹಾಮಂಗಲ ಜರುಗಿತು. ದೇವರ ಮನೆಯಿಂದ ಡೊಳ್ಳು, ಭಾಜಾ ಭಜಂತ್ರಿ, ಮಂಗಳ ವಾದ್ಯಗಳೊಂದಿಗೆ ಕುಂಭ ಕಳಸದ ಮೆರವಣಿಗೆ ನಡೆಯಿತು. ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ಕಾಯಿ, ಕರ್ಪೂರ, ನೈವೇದ್ಯ ಅರ್ಪಿಸಿ ಭಕ್ತಿ ಸಮರ್ಪಿಸಿದರು. ಹಾಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ADVERTISEMENT
ಕವಿತಾಳ ಸಮೀಪದ ಹಾಲಾಪುರದಲ್ಲಿ ಕರಿಯಪ್ಪ ತಾತನ ಜಾತ್ರೆ ನಿಮಿತ್ತ ಶುಕ್ರವಾರ ರಥೋತ್ಸವ ಅದ್ದೂರಿಯಾಗಿ ಜರುಗಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.