ADVERTISEMENT

ಬಂದ್‌ ಕರೆ: ಜಿಲ್ಲೆಯಾದ್ಯಂತ ಬಂದೋಬಸ್ತ್‌

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 15:27 IST
Last Updated 12 ಫೆಬ್ರುವರಿ 2020, 15:27 IST
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ   

ರಾಯಚೂರು: ಸರೋಜಿನಿ ಮಹಿಷಿ ವರದಿ ಜಾರಿ ಮಾಡುವ ಕುರಿತು ಫೆಬ್ರುವರಿ 13 ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 3 ಕೆ.ಎಸ್‌.ಆರ್.ಪಿ , 10 ಡಿಎಅರ್ , 500 ಪೊಲೀಸ್ ಕಾನ್‌ಸ್ಟೆಬಲ್‌ಗಳನ್ನು ನಿಯೋಜನೆ ಮಾಡಲಾಗಿದೆ. ಬಸ್‌ ನಿಲ್ದಾಣ ಮತ್ತು ಬಂದ್ ಸ್ಥಳಗಳಲ್ಲಿ ಕ್ಯಾಮರಾ ಮ್ಯಾನ್‌ಗಳನ್ನು ಮತ್ತು ಸಿ.ಸಿ ಕ್ಯಾಮರಾಗಳ ಅಳವಡಿಸುವುದಲ್ಲದೇ 40 ಪಿಎಸ್ಐ ,20 ಸಿಪಿಐ, 04 ಡಿವೈಎಸ್ಪಿ ಹಾಗೂ ಇಬ್ಬರು ಎಸ್ಪಿಯ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ಅಲ್ಲದೇ ಬಂದ್ ಸಮಯದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವ ಪ್ರಕರಣ ನೆಡದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

ADVERTISEMENT

ರಸ್ತೆ ಮೇಲೆ ಟೈರ್ ಗಳನ್ನು ಸುಟ್ಟು ಸಂಚಾರಕ್ಕೆ ಅಡ್ಡಿ ಪಡಿಸುವುದು ಮಾಡಿದವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಸಾರ್ವಜನಿಕರು, ಹೋರಾಟಗಾರರು ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಲು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.