ADVERTISEMENT

ಕಾಂಗ್ರೆಸ್‌ ಟಿಕೆಟ್‌: ರಾಯಚೂರಿನಲ್ಲಿ ಹಾಲಿ ಮೂವರು ಶಾಸಕರ ಪೈಕಿ ಇಬ್ಬರಿಗೆ ಟಿಕೆಟ್

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 12:23 IST
Last Updated 25 ಮಾರ್ಚ್ 2023, 12:23 IST
ಬಸನಗೌಡ ದದ್ದಲ್‌ ಹಾಗೂ ಬಸನಗೌಡ ತುರ್ವಿಹಾಳ
ಬಸನಗೌಡ ದದ್ದಲ್‌ ಹಾಗೂ ಬಸನಗೌಡ ತುರ್ವಿಹಾಳ   

ರಾಯಚೂರು: ಜಿಲ್ಲೆಯ ಮೂವರು ಕಾಂಗ್ರೆಸ್‌ ಶಾಸಕರ ಪೈಕಿ ರಾಯಚೂರು ಗ್ರಾಮೀಣ ಹಾಗೂ ಮಸ್ಕಿ ಶಾಸಕರಿಗೆ ಮತ್ತೆ ಟಿಕೆಟ್‌ ಘೋಷಿಸಲಾಗಿದೆ.

ಪರಿಶಿಷ್ಟ ಜಾತಿಗೆ ಮೀಸಲಾತಿರುವ ಲಿಂಗಸುಗೂರು ವಿಧಾನಸಭೆ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್‌ ಶಾಸಕ ಡಿ.ಎಚ್‌.ಹುಲಗೇರಿ ಅವರಿಗೆ ಇನ್ನೂ ಟಿಕೆಟ್‌ ಘೋಷಿಸದಿರುವುದು ಗೊಂದಲಕ್ಕೆ ಎಡೆಮಾಡಿದೆ.

ನಿವೃತ್ತ ಎಂಜಿನಿಯರ್‌ ರುದ್ರಯ್ಯ ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ಬೆಂಗಳೂರಿನಿಂದ ಲಿಂಗಸುಗೂರಿಗೆ ಆಗಮಿಸಿದ್ದು, ಟಿಕೆಟ್‌ ಆಕಾಂಕ್ಷಿಯಾಗಿ ಲಿಂಗಸುಗೂರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಕೈಗೊಂಡಿದ್ದ ಸಮೀಕ್ಷೆಯಲ್ಲಿ ಹಾಲಿ ಶಾಸಕರ ವಿರುದ್ಧದ ಅಭಿಮತ ವ್ಯಕ್ತವಾಗಿದೆ ಎನ್ನುವುದು ಪಕ್ಷದ ಮೂಲಗಳ ಮಾಹಿತಿ. ವಿಧಾನ ಪರಿಷತ್‌ ಸದಸ್ಯ ಶರಣಗೌಡ ಬಯ್ಯಾಪುರ ಅವರು ಡಿ.ಎಚ್‌.ಹುಲಗೇರಿ ಅವರಿಗೆ ಟಿಕೆಟ್‌ ನೀಡದಂತೆ ಪ್ರಭಾವ ಬೀರುತ್ತಿದ್ದಾರೆ ಎನ್ನುವುದು ಕ್ಷೇತ್ರದಾದ್ಯಂತ ಚರ್ಚೆಯಲ್ಲಿದೆ.

ADVERTISEMENT

ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಬಸನಗೌಡ ದದ್ದಲ್‌ ಹಾಗೂ ಮಸ್ಕಿ ಕ್ಷೇತ್ರದಿಂದ ಬಸನಗೌಡ ತುರ್ವಿಹಾಳ ಮತ್ತೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.