ಕವಿತಾಳ: ‘ಆಶಾಕಿರಣ ದೃಷ್ಟಿ ಕೇಂದ್ರದಲ್ಲಿ ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ನೇತ್ರ ತಪಾಸಣೆಯ ಜೊತೆಗೆ ಕನ್ನಡವನ್ನು ಉಚಿತವಾಗಿ ನೀಡಲಾಗುವುದು’ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅರುಣಾ ತಿಳಿಸಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು,‘ಕಣ್ಣಿನ ಪೊರೆ, ಡಯಾಬಿಟಿಕ್ ರೆಟಿನೋಪತಿ ಹಾಗೂ ಮತ್ತಿತರ ಸಮಸ್ಯೆ ಕಂಡು ಬಂದಲ್ಲಿ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಗುವುದು’ ಎಂದರು.
ನೇತ್ರಾಧಿಕಾರಿಗಳಾದ ಯಲ್ಲಪ್ಪ ಕಂಡಗೊಳ್ಳಿ, ಓಸ್ಮಾನ್ ಸಹಾರಾ, ಡಾ.ಮಲ್ಲನಗೌಡ, ಡಾ.ತಬುಸುಂ, ಆಪ್ತ ಸಮಾಲೋಚಕಿ ಅಕ್ಕಮಹಾದೇವಿ, ಬಷೀರ್ ಆಹ್ಮದ್, ಸ್ವಾತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.