ADVERTISEMENT

ಸಿಂಧನೂರು: ಸೆ.15 ರಂದು ಕಿತ್ತೂರು ಚನ್ನಮ್ಮ ಪುತ್ಥಳಿ ಅನಾವರಣ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2024, 13:14 IST
Last Updated 11 ಸೆಪ್ಟೆಂಬರ್ 2024, 13:14 IST
ಪಂಪನಗೌಡ ತಾವರಗೇರಾ
ಪಂಪನಗೌಡ ತಾವರಗೇರಾ   

ಸಿಂಧನೂರು: ‘ನಗರದಲ್ಲಿ ಕಿತ್ತೂರುರಾಣಿ ಚನ್ನಮ್ಮ ವೃತ್ತ ಹಾಗೂ ನೂತನ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಸೆ.15 ರಂದು ನಡೆಯಲಿದೆ’ ಎಂದು ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪಂಪನಗೌಡ ತಾವರಗೇರಾ ತಿಳಿಸಿದರು.

ಈ ಬಗ್ಗೆ ಬುಧವಾರ ಹೇಳಿಕೆ ನೀಡಿರುವ ಅವರು, ‘ಸೆ.15 ರಂದು ಬೆಳಿಗ್ಗೆ ನಗರದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಅಂಬಾದೇವಿ ದೇವಸ್ಥಾನದಿಂದ ಚನ್ನಮ್ಮ ವೃತ್ತದವರೆಗೆ ಅದ್ದೂರಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ವಾಸವಿ ಕಲ್ಯಾಣ ಮಂಟಪದಲ್ಲಿ ಬಹಿರಂಗ ಕಾರ್ಯಕ್ರಮ ಜರುಗಲಿದೆ’ ಎಂದರು.

‘ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಹರಿಹರ ಪೀಠದ ವಚನಾನಂದ ಸ್ವಾಮೀಜಿ, ಮನಗೊಳಿ ಅಭಿನವ ಸಂಗನಬಸವಸ್ವಾಮಿ ಹಿರೇಮಠ, ಯದ್ದಲದೊಡ್ಡಿಯ ಮಹಾಲಿಂಗ ಸ್ವಾಮೀಜಿ, ಕರಿಬಸವನಗರದ ಸೋಮನಾಥ ಶಿವಾಚಾರ್ಯರು, ವೆಂಕಟಗಿರಿ ಕ್ಯಾಂಪ್‌ನ ದ್ದರಾಮೇಶ್ವರ ಶರಣರು, ಜಂಗಮರಹಳ್ಳಿಯ ಚಂದ್ರಮೌನೇಶ ತಾತನವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿವರು. ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಜಯಾನಂದ ಕಾಶಪ್ಪನವರ, ಹಂಪನಗೌಡ ಬಾದರ್ಲಿ, ಆರ್.ಬಸನಗೌಡ ತುರವಿಹಾಳ, ಸಂಸದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಪಿ.ಪಾಟೀಲ ಸೇರಿದಂತೆ ಅನೇಕ ಹಾಲಿ–ಮಾಜಿ ಜನಪ್ರತಿನಿಧಿಗಳು, ಸಮುದಯದ ಮುಖಂಡರು, ಗಣ್ಯರು ಭಾಗಿಯಾಗಲಿದ್ದಾರೆ’ ಎಂದು ಮಾಹಿತಿ ನೀಡಿದರು.

ADVERTISEMENT

ಮುಖಂಡ ಕಲ್ಯಾಣಪ್ಪ ಹಿರೇಗೌಡ್ರು ರೌಡಕುಂದಾ, ಬಿಜೆಪಿ ಮುಖಂಡ ಸಿದ್ರಾಮೇಶ ಮನ್ನಾಪುರ, ಗೌರವಾಧ್ಯಕ್ಷ ವೀರಭದ್ರಪ್ಪ ಗಸ್ತಿ, ಮುಖಂಡರಾದ ನಾಗರಾಜ ಗಸ್ತಿ, ಶಿವಕುಮಾರ ಕುರುಕುಂದಾ, ನಾಗಪ್ಪ ಹಿರೇಗೌಡ್ರು, ವಿರೂಪಕ್ಷಪ್ಪ ಮಾಲಿಗೌಡ, ಉಗ್ರಾಣ ಶರಣಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.