ರಾಯಚೂರು: ಪೊಲೀಸ್ ಭದ್ರತೆಯೊಂದಿಗೆ ಜಿಲ್ಲೆಯ ಏಳು ಡಿಪೋಗಳಿಂದ ಗುರುವಾರ 15 ಬಸ್ಗಳು ಸಂಚಾರ ಆರಂಭಿಸಿವೆ.
'ರಾಯಚೂರು ಡಿಪೋದಿಂದ ಮಂತ್ರಾಲಯ ಮತ್ತು ಕರ್ನೂಲ್ ಗೆ ಸರ್ಕಾರಿ ಬಸ್ ಸೇವೆ ಆರಂಭಿಸಿದ್ದೇವೆ' ಎಂದು ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರಾಯಚೂರು ವಿಭಾಗದ ನಿಯಂತ್ರಕ ವೆಂಕಟೇಶ ತಿಳಿಸಿದರು.
ವೇತನ ಪರಿಷ್ಕರಣೆಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮದ ನೌಕರರು ಕೈಗೊಂಡಿರುವ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.