ADVERTISEMENT

ರಾಯಚೂರು: ಪೊಲೀಸ್ ಭದ್ರತೆಯಲ್ಲಿ 15 ಬಸ್ ಸಂಚಾರ ಆರಂಭ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 6:29 IST
Last Updated 8 ಏಪ್ರಿಲ್ 2021, 6:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಯಚೂರು: ಪೊಲೀಸ್ ಭದ್ರತೆಯೊಂದಿಗೆ ಜಿಲ್ಲೆಯ ಏಳು ಡಿಪೋಗಳಿಂದ ಗುರುವಾರ 15 ಬಸ್‌ಗಳು ಸಂಚಾರ ಆರಂಭಿಸಿವೆ.

'ರಾಯಚೂರು ಡಿಪೋದಿಂದ ಮಂತ್ರಾಲಯ ಮತ್ತು ಕರ್ನೂಲ್ ಗೆ ಸರ್ಕಾರಿ ಬಸ್ ಸೇವೆ ಆರಂಭಿಸಿದ್ದೇವೆ' ಎಂದು ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರಾಯಚೂರು ವಿಭಾಗದ ನಿಯಂತ್ರಕ ವೆಂಕಟೇಶ ತಿಳಿಸಿದರು.

ವೇತನ ಪರಿಷ್ಕರಣೆಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮದ ನೌಕರರು ಕೈಗೊಂಡಿರುವ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.