ರಾಯಚೂರು ಜಿಲ್ಲೆಯ ಲಿಂಗಸುಗೂರಲ್ಲಿ ಬಸ್ ನಿಲ್ದಾಣದೊಳಗೆ ಖಾಸಗಿ ವಾಹನಗಳು ಬಂದು ಪ್ರಯಾಣಿಕರನ್ನು ಒಯ್ದವು
ರಾಯಚೂರು: ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ 50ರಷ್ಟು ಬಸ್ಗಳು ಮಾತ್ರ ಸಂಚಾರಕ್ಕೆ ಇಳಿದಿವೆ. ರಾಯಚೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದ ಬಸ್ಗಳು ಓಡಾಡುತ್ತಿವೆ.
ರಸ್ತೆ ಸಾರಿಗೆ ನೌಕರರ ಮುಷ್ಕರ ಇದೆ ಎಂದು ಮೊದಲೇ ತಿಳಿದ ಕಾರಣ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿಲ್ಲ. ಪ್ರೌಢಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ.
ಲಿಂಗಸುಗೂರಿನಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಪ್ರಯಾಣಿಕರ ಪರದಾಟ ನಡೆದಿದ್ದು, ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಓಡಾಟ ಮುಂದುವರಿದಿದೆ. ಮಾನ್ವಿಯಲ್ಲಿ ಬಸ್ ಸಂಚಾರ ವಿರಳವಾಗಿದೆ. ದೇವದುರ್ಗ ಘಟಕದ 34 ಬಸ್ಗಳು ಓಡಾಡುತ್ತಿದ್ದವು. ಮುಷ್ಕರ ಹಿನ್ನೆಲೆ 9 ಬಸ್ ಓಡುತ್ತಿವೆ ಎಂದು ಘಟಕ ವ್ಯವಸ್ಥಾಪಕ ರಾಮನಗೌಡ ತಿಳಿಸಿದ್ದಾರೆ.
ಮಸ್ಕಿಯಲ್ಲಿ ಅಲ್ಲೊಂದು ಇಲ್ಲೊಂದು ಈಶಾನ್ಯ ಸಾರಿಗೆ ಸಂಸ್ಥೆ ಬಸ್ಗಳು ಸಂಚರಿಸುತ್ತಿವೆ. ಖಾಸಗಿ ಕ್ಯಾಬ್ಗಳು ರಸ್ತೆಗೆ ಇಳಿದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.