ಮಾನ್ವಿ: ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ವಿಶ್ವ ಮಾನವ ರಾಷ್ಟ್ರ ಕವಿ ಕುವೆಂಪು ಅವರ ಜಯಂತಿ ಆಚರಣೆ ಮಾಡಲಾಯಿತು.
ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ವಿಜಯಕುಮಾರ ಅವರು ರಾಷ್ಟ್ರ ಕವಿ ಕುವೆಂಪುರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ಅವರು, ’ಸಾಹಿತ್ಯ ಕ್ಷೇತ್ರದ ಮೂಲಕ ವೈಚಾರಿಕ ತತ್ವಗಳು ಹಾಗೂ ವಿಶ್ವ ಮಾನವ ಸಂದೇಶ ನೀಡಿದ ಕುವೆಂಪು ಅವರ ತತ್ವಾದರ್ಶಗಳ ಪಾಲನೆ ಅಗತ್ಯ‘ ಎಂದರು.
ಕಚೇರಿ ಅಧೀಕ್ಷಕ ನಿಂಗನಗೌಡ, ಇತರ ಸಿಬ್ಬಂದಿ ರಾಮಲಿಂಗಪ್ಪ, ರಾಜಶೇಖರ, ವಾಸೀಂ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.