ADVERTISEMENT

ಶಕ್ತಿನಗರ: ವೈಟಿಪಿಎಸ್‌ನಲ್ಲಿ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 16 ಮೇ 2022, 3:26 IST
Last Updated 16 ಮೇ 2022, 3:26 IST
ಹುಸನ್ಮಾ ಅಲಿ
ಹುಸನ್ಮಾ ಅಲಿ   

ಶಕ್ತಿನಗರ: ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ (ವೈಟಿಪಿಎಸ್) ಕಲ್ಲಿದ್ದಲು ಸಾಗಿಸುವ ಬೆಲ್ಟ್‌ಗೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿದ್ದಾರೆ.

ಚಿಕ್ಕಸೂಗೂರು ಗ್ರಾಮದ ನಿವಾಸಿ ಹುಸನ್ಮಾ ಅಲಿ(30) ಮೃತಪಟ್ಟ ಕಾರ್ಮಿಕ. ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಸಾಗಿಸುವ ಬೆಲ್ಟ್‌ನಲ್ಲಿ ಕೆಲಸ ಮಾಡುವಾಗ ಮೃತಪಟ್ಟಿದ್ದಾರೆ. ಘಟನೆ ಕುರಿತು ಪರಿಶೀಲನೆ ನಡೆದಿದೆ ಎಂದು ವೈಟಿಪಿಎಸ್ ಯೋಜನಾ ಪ್ರದೇಶದ ಮುಖ್ಯಸ್ಥ
ಆಂಜನೇಯ ನಾಯಕ ಹೇಳಿದರು.

ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.