ADVERTISEMENT

ಕೋವಿಡ್‌ ಕೇರ್‌ ಸೆಂಟರ್‌ಗೆ ಸೋಂಕಿತರ ಸ್ಥಳಾಂತರ 

​ಪ್ರಜಾವಾಣಿ ವಾರ್ತೆ
Published 7 ಮೇ 2021, 15:36 IST
Last Updated 7 ಮೇ 2021, 15:36 IST
ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ
ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ   

ರಾಯಚೂರು: ಮನೆಗಳಲ್ಲಿ ಐಸೋಲೇಷನ್‌ನಲ್ಲಿ ಇರುವವರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್‌ ನಿರ್ವಹಣೆ ಕುರಿತು ಶುಕ್ರವಾರ ಸಭೆ ನಡೆಸಿದರು.

ಕೋವಿಡ್ ಸೋಂಕಿನ ಎರಡನೇ ಅಲೆಯ ಸಂಪರ್ಕವನ್ನು ಕಡಿತ ಮಾಡಬೇಕು. ಇಲ್ಲವಾದರೆ ಮುಂದೆ ಇನ್ನೂ ಅಪಾಯವಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಹೋಂ ಐಸೋಲೇಷನ್ ಇರುವವರ ಮನವೊಲಿಸಿ, ಕೂಡಲೇ ಅವರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಬೇಕು. ಒಂದು ವೇಳೆ ಈ ಉಚಿತ ಸೌಲಭ್ಯ ಪಡೆಯದೇ ತಾವೇ ಹಣ ಪಾವತಿಸಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯಬಯಸುವವರಿಗೆ ಜಿಲ್ಲೆಯ ಲಾಡ್ಜ್‌ಗಳು ಅಥವಾ ಹೊಟೇಲ್‌ಗಳಲ್ಲಿ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.