ADVERTISEMENT

ರಾಯಚೂರು–ಯಾದಗಿರಿ: ವಿಶೇಷ ಪ್ಯಾಕೇಜ್‌ಗೆ ಸಂಸದ ರಾಜಾ ಅಮರೇಶ್ವರ ಪತ್ರ

​ಪ್ರಜಾವಾಣಿ ವಾರ್ತೆ
Published 10 ಮೇ 2021, 13:14 IST
Last Updated 10 ಮೇ 2021, 13:14 IST
ಸಂಸದ ರಾಜಾ ಅಮರೇಶ್ವರ ನಾಯಕ
ಸಂಸದ ರಾಜಾ ಅಮರೇಶ್ವರ ನಾಯಕ   

ರಾಯಚೂರು: ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ಮಹತ್ವಾಕಾಂಕ್ಷಿ ಜಿಲ್ಲೆಯಾಗಿರುವ ರಾಯಚೂರು–ಯಾದಗಿರಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಒದಗಿಸುವಂತೆ ಸಂಸದ ರಾಜಾ ಅಮರೇಶ್ವರ ನಾಯಕ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್‌ ಅವರಿಗೆ ಪತ್ರ ಬರೆದಿದ್ದಾರೆ.

ಹಲವಾರು ಕಾರ್ಮಿಕರು ತಮ್ಮ ಕೆಲಸಗಳನ್ನು ಕಳೆದುಕೊಂಡಿದ್ದು ಮಕ್ಕಳು- ಬಂಧುಗಳಿಗೆ ಚಿಕಿತ್ಸೆ ಕೊಡಲು ಪರದಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಬಡ ಜನಾಂಗದವರಿದ್ದು ಹೆಚ್ಚಾಗಿ ನೆಲೆಸಿದ್ದು ಅವರಿಗೆ ಈ ಚಿಕಿತ್ಸೆ ವೆಚ್ಚ ಭರಿಸಲು ಶಕ್ತವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಯುದ್ಧೋಪಾದಿಯಲ್ಲಿ ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಿದ್ದರೂ ರೆಮಿಡಿಸಿವರ್, ಆಕ್ಸಿಜನ್, ವ್ಯಾಕ್ಸಿನ್ ಕೊರತೆಯಿಂದಾಗಿ ಕಂಗೆಟ್ಟಿದ್ದಾರೆ. ಇದಲ್ಲದೆ ಕ್ಷೇತ್ರದ ಜಿಲ್ಲಾ ಆರೋಗ್ಯ ಇಲಾಖೆಗೆ ಹೆಚ್ಚಿನ ಸಿಟಿ ಸ್ಕ್ಯಾ ನ್, ಆ್ಯಂಬುಲೆನ್ಸ್ ಹಾಗೂ ಆಕ್ಸಿಜನ್ ಬಾಟ್ಲಿಂಗ್ ಪ್ಲಾಂಟ್‌ಗಳ ಅವಶ್ಯಕತೆಯಿದೆ ಎಂದು ಕೋರಿದ್ದಾರೆ.

ADVERTISEMENT

ಕೇಂದ್ರ ಸರ್ಕಾರದಿಂದ ಮಹತ್ವಾಕಾಂಕ್ಷಿ ಜಿಲ್ಲೆಗಳೆಂದು ಘೋಷಿಸಿರುವ ಹಾಗೂ ಕಲ್ಯಾಣ ಕರ್ನಾಟಕದಲ್ಲಿಯೇ ಅತಿ ಹಿಂದುಳಿದ ಈ ಜಿಲ್ಲೆಗಳಿಗೆ ಕೋವಿಡ್-19 ವಿಶೇಷ ಪ್ಯಾಕೇಜನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಅರಿಕೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.