ADVERTISEMENT

ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2019, 18:30 IST
Last Updated 16 ಅಕ್ಟೋಬರ್ 2019, 18:30 IST
ರಾಯಚೂರಿನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಸಂಘಟನೆ ನೇತೃತ್ವದಲ್ಲಿ ವಿಮಾ ಪ್ರತಿನಿಧಿಗಳು ಬುಧವಾರ ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಸಂಘಟನೆ ನೇತೃತ್ವದಲ್ಲಿ ವಿಮಾ ಪ್ರತಿನಿಧಿಗಳು ಬುಧವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ಎಲ್‌ಐಸಿ ಪ್ರೀಮಿಯಂ ಮೇಲೆ ವಿಧಿಸುವ ಜಿಎಸ್‌ಟಿ ಮತ್ತು ತಡವಾಗಿ ಪಾವತಿಸುವ ಪ್ರೀಮಿಯಂ ಮೇಲೆ ವಿಧಿಸುವ ದಂಡವನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಸಂಘಟನೆ ನೇತೃತ್ವದಲ್ಲಿ ವಿಮಾ ಪ್ರತಿನಿಧಿಗಳು ಎಲ್‌ಐಸಿ ಕಚೇರಿಯ ಎದುರಿಗೆ ಬುಧವಾರ ಪ್ರತಿಭಟನೆ ನಡೆಸಿದರು.

ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ತಡೆಯಬೇಕು. ಪಾಲಸಿದಾರರಿಗೆ ಬೋನಸ್ ಹೆಚ್ಚಳ ಮಾಡಬೇಕು. ವಿಮಾ ಪ್ರೀಮಿಯಂ ಪಾವತಿ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ಜಿಎಸ್‌ಟಿ ಸಂಪೂರ್ಣವಾಗಿ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ವಿಮಾ ಪ್ರತಿನಿಧಿಗಳಿಗೆ ಕಲ್ಯಾಣ ನಿಧಿ ಸ್ಥಾಪಿಸಿ ಸೌಲಭ್ಯ ನೀಡಬೇಕು. ವೈದ್ಯಕೀಯ ವೆಚ್ಚವನ್ನು ಪಾವತಿ ಮಾಡಬೇಕು. ವಿವಿಧ ವಿಭಾಗದ ಪ್ರತಿನಿಧಿಗಳಿಗೆ ಸೇವಾ ಭದ್ರತೆ ಒದಗಿಸಿ ರಕ್ಷಣೆ ಮಾಡಬೇಕು. ಗ್ರಾಚ್ಯಟಿ ಹಾಗೂ ಗುಂಪು ವಿಮೆ ಹೆಚ್ಚಿಸಬೇಕು ಎಂದು ವಿಭಾಗೀಯ ಅಧಿಕಾರಿಗೆ ಮನವಿ ಸಲ್ಲಿಸಿದರು.

ADVERTISEMENT

ಸಂಘಟನೆ ಪದಾಧಿಕಾರಿಗಳಾದ ಎನ್.ಮಂಜುನಾಥ, ಶ್ರೀನಿವಾಸ, ಈರಣ್ಣ ಆರೋಲಿ, ಕೃಷ್ಣಾರೆಡ್ಡಿ, ಪಾಟೀಲ, ದೊಡ್ಡನಗೌಡ, ಶಿವರಾಜ, ಚನ್ನಾರೆಡ್ಡಿ, ಗೋವಿಂದ, ಮರಸಪ್ಪ, ಶ್ರೀನಿವಾಸ, ಬಸವರಾಜ, ತಿಮ್ಮಾರೆಡ್ಡಿ, ವೀರೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.