ADVERTISEMENT

ಕವಿತಾಳ: ಗುಂಪು ಹಲ್ಲೆ ನಡೆಸಿ ವ್ಯಕ್ತಿಯ ಕೊಲೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2024, 4:56 IST
Last Updated 28 ಡಿಸೆಂಬರ್ 2024, 4:56 IST
<div class="paragraphs"><p> (ಪ್ರಾತಿನಿಧಿಕ ಚಿತ್ರ)</p></div>

(ಪ್ರಾತಿನಿಧಿಕ ಚಿತ್ರ)

   

ಕವಿತಾಳ( ರಾಯಚೂರು ಜಿಲ್ಲೆ): ಮಸ್ಕಿ ತಾಲ್ಲೂಕಿನ ಸೊಸೈಟಿ ಕ್ಯಾಂಪ್ ನಲ್ಲಿ ಏಳು ಜನರ ಗುಂಪು ಹಲ್ಲೆ ನಡೆಸಿ ವ್ಯಕ್ತಿಯೊಬ್ಬರ ಕೊಲೆ ಮಾಡಿದ ಘಟನೆ ಶುಕ್ರವಾರ ನಡೆದಿದೆ.

ಕ್ಯಾಂಪ್ ನಿವಾಸಿ ರಾಜಪ್ಪ (41) ಕೊಲೆಯಾದ ವ್ಯಕ್ತಿ, ಅದೇ ಕ್ಯಾಂಪ್ ನ ಏಳು ಜನರು ಜಮೀನಿನಲ್ಲಿ ಜಗಳ ಮಾಡಿ ಹಲ್ಲೆ ಮಾಡಿದ್ದಾರೆ, ತೀವ್ರ ಗಾಯಗೊಂಡಿದ್ದ ರಾಜಪ್ಪ ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಿಸದೆ ಶುಕ್ರವಾರ ಸಂಜೆ ರಾಜಪ್ಪ ಮೃತ ಪಟ್ಟಿದ್ದಾನೆ ಎನ್ನಲಾಗಿದೆ.

ADVERTISEMENT

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಕವಿತಾಳ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.