
ಪ್ರಜಾವಾಣಿ ವಾರ್ತೆ
ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿ ಎಣಿಕೆ ಕಾರ್ಯ ಬುಧವಾರ ನಡೆದಿದ್ದು, ₹5.41 ಕೋಟಿ ಕಾಣಿಕೆ ಸಂಗ್ರಹವಾಗಿದೆ.
ಅ.15ರಿಂದ ನ.17ರವರೆಗಿನ 34 ದಿನಗಳಲ್ಲಿ ₹5,26,89,128 ಮೊತ್ತದ ನೋಟುಗಳು, ₹14,58,100 ಮೊತ್ತದ ನಾಣ್ಯಗಳು ಸೇರಿ ₹5,41,47,228 ನಗದು, 80 ಗ್ರಾಂ ಚಿನ್ನ ಹಾಗೂ 1,610 ಗ್ರಾಂ ಬೆಳ್ಳಿ ಆಭರಣಗಳು ಸಂಗ್ರಹವಾಗಿವೆ ಎಂದು ಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.