ADVERTISEMENT

ಮಾನ್ವಿ: ನಾಲ್ವರು ರಿಮ್ಸ್‌ಗೆ ದಾಖಲು

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 16:31 IST
Last Updated 3 ಏಪ್ರಿಲ್ 2020, 16:31 IST

ಮಾನ್ವಿ: ಮೈಸೂರಿನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಪಟ್ಟಣದ ಇಬ್ಬರು ಹಾಗೂ ತಾಲ್ಲೂಕಿನ ಗ್ರಾಮೀಣ ಭಾಗದ ಇಬ್ಬರನ್ನು ಆರೋಗ್ಯ ತಪಾಸಣೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಲ್ವರು ಮಾ.26ರಂದು ಮಾನ್ವಿ ಪಟ್ಟಣಕ್ಕೆ ಮರಳಿ ಬಂದಿದ್ದರು ಎನ್ನಲಾಗಿದೆ. ವಿಷಯ ತಿಳಿದ ತಾಲ್ಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಗುರುವಾರ ಸದರಿ ವ್ಯಕ್ತಿಗಳ ಮನೆಗಳಿಗೆ ಭೇಟಿ ನೀಡಿ ಸೂಕ್ತ ಭದ್ರತೆಯೊಂದಿಗೆ ರಿಮ್ಸ್‌ಗೆ ಕರೆದೊಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT