ಮಾನ್ವಿ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರು ಮತ್ತು ಜನಸಾಮಾನ್ಯರ ವಿರೋಧಿ ಕಾಯ್ದೆಗಳ ಜಾರಿಗಾಗಿ ಹೊರಡಿಸಿರುವ ಸುಗ್ರೀವಾಜ್ಞೆಗಳನ್ನು ರದ್ದುಪಡಿಸಬೇಕು’ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್.ಪೂಜಾರ ಹೇಳಿದರು.
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟದ ಜನಜಾಗೃತಿ ಜಾಥಾ ವಾಹನ ಗುರುವಾರ ಮಾನ್ವಿಗೆ ಬಂದ ಸಂದರ್ಭದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.
ಕರ್ನಾಟಕ ರೈತ ಸಂಘದ ಜಿಲ್ಲಾ ಅಧ್ಯಕ್ಷ ಅಶೋಕ ನಿಲೋಗಲ್, ತಾಲ್ಲೂಕು ಅಧ್ಯಕ್ಷ ವಿ.ಮುದುಕಪ್ಪ ನಾಯಕ, ಜನಶಕ್ತಿ ಸಂಘಟನೆಯ ಮಾರೆಪ್ಪ ಹರವಿ, ತಾಯಪ್ಪ ಬಿ.ಹೊಸೂರು, ಪಿ.ಅನಿಲ್ ಕುಮಾರ, ರಾಘವೇಂದ್ರ , ಲಕ್ಷ್ಮಣ ಜಾನೇಕಲ್ ಮುಂತಾದವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.