ADVERTISEMENT

ಹೂಮಳೆ, ಪಟಾಕಿ ಸಿಡಿಸಿ ಕಾಂಗ್ರೆಸ್‌ ನಾಯಕರಿಗೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 17:48 IST
Last Updated 5 ಏಪ್ರಿಲ್ 2021, 17:48 IST
ಕಾಂಗ್ರೆಸ್ ನಾಯಕರಿಗೆ ಭರ್ಜರಿ ಸ್ವಾಗತ ಕೋರಿದ ಕಾರ್ಯಕರ್ತರು
ಕಾಂಗ್ರೆಸ್ ನಾಯಕರಿಗೆ ಭರ್ಜರಿ ಸ್ವಾಗತ ಕೋರಿದ ಕಾರ್ಯಕರ್ತರು   

ತುರ್ವಿಹಾಳ (ರಾಯಚೂರು): ಮಸ್ಕಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸಿಂಧನೂರು ತಾಲ್ಲೂಕಿನ ಗ್ರಾಮಗಳಿಗೆ ಸೋಮವಾರ ಉಪಚುನಾವಣೆ ಪ್ರಚಾರಕ್ಕಾಗಿ ಆಗಮಿಸಿದ್ದ ಕಾಂಗ್ರೆಸ್‌ ನಾಯಕರನ್ನು ಬೆಂಬಲಿಗರು ಭಾರಿ ಪ್ರಮಾಣದಲ್ಲಿ ಹೂಮಳೆ ಸುರಿಸಿ, ಪಟಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತಿಸಿದರು.

ಸಿಂಧನೂರಿನಿಂದ ಕುಷ್ಟಗಿ ಮಾರ್ಗದಲ್ಲಿರುವ ಉಮಲೂಟಿ, ಕಲಮಂಗಿ, ತುರ್ವಿಹಾಳ, ಗುಂಜಳ್ಳಿ, ವಿರೂಪಾಪುರ ಹಾಗೂ ಗೌಡನಬಾವಿ ಗ್ರಾಮಗಳುದ್ದಕ್ಕೂ ಕಾಂಗ್ರೆಸ್‌ ಕಾರ್ಯಕರ್ತರು ನಿಂತುಕೊಂಡಿದ್ದರು. ಎಲ್ಲ ಕಡೆಗಳಲ್ಲಿ ಬಹಿರಂಗ ಪ್ರಚಾರ ವೇದಿಕೆಗಳನ್ನು ನಿರ್ಮಾಣ ಮಾಡಲಾಗಿತ್ತು.

ತುರ್ವಿಹಾಳ ಪಟ್ಟಣದಲ್ಲಿ ತೆರೆದ ವಾಹನದಲ್ಲಿ ಕಾಂಗ್ರೆಸ್‌ ನಾಯಕರು ಪ್ರಚಾರ ನಡೆಸಿದರು. ಜೆಸಿಬಿ ಯಂತ್ರದ ಸಹಾಯದಿಂದ ಬಕೆಟ್‌ನೊಳಗಿಂದ ಹೂಮಳೆ ಸುರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.