ತುರ್ವಿಹಾಳ: ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿಗೆ ತಂದ ಜನಪರ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿವೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಸಿಂಧನೂರು ತಾಲ್ಲೂಕಿನ ಗ್ರಾಮಗಳಾದ ಗುಂಜಳ್ಳಿ, ತಿಡಿಗೋಳ, ಉಪ್ಪಲದೊಡ್ಡಿ, ಕಾನಿಹಾಳ, ಶ್ರೀನಿವಾಸ ಕ್ಯಾಂಪ್ ಮತ್ತು ತುರ್ವಿಹಾಳ ಪಟ್ಟಣದಲ್ಲಿ ಬುಧವಾರ ಬಸನಗೌಡ ತುರ್ವಿಹಾಳ ಪರ ಚುನಾವಣೆ ಪ್ರಚಾರದ ವೇಳೆ ಮಾತನಾಡಿದರು.
ಮಸ್ಕಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಸಂತಕುಮಾರ, ಕಾಂಗ್ರೆಸ್ ಮುಖಂಡರಾದ ಶೇಖರಪ್ಪ ಗಿಣಿವಾರ, ಎಚ್.ಎನ್.ಬಡಿಗೇರ್, ಪಾಮಯ್ಯ ಮುರಾರಿ, ಆರ್.ಸಿದ್ದನಗೌಡ ತುರ್ವಿಹಾಳ, ಬಾಪೂಗೌಡ ದೇವರಮನಿ, ಶಿವಪುತ್ರಪ್ಪ ಕೆಂಗೇರಿ, ಭೀಮದಾಸ, ಅಬೂತುರಾಬ್, ನಾಗರಾಜ, ಮುತ್ತಣ್ಣ ನವಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.