ADVERTISEMENT

‘ಮಸ್ಕಿ ಸಮಗ್ರ ಅಭಿವೃದ್ಧಿಗೆ ಸಹಕರಿಸಿ’

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 11:41 IST
Last Updated 7 ಏಪ್ರಿಲ್ 2021, 11:41 IST

ಮಸ್ಕಿ: ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರನ್ನು ಉಪ ಚುನಾವಣೆಯಲ್ಲಿ ಬೆಂಬಲಿಸಬೇಕು ಎಂದು ಸವಿತಾ ಸಮಾಜ ಅಭಿವೃದ್ಧಿ ಮಂಡಳಿ ಅಧ್ಯಕ್ಷ ನರೇಶಕುಮಾರ ಕರೆ ನೀಡಿದರು.

ಪಟ್ಟಣದಲ್ಲಿ ಬುಧವಾರ ನಡೆದ ಸವಿತಾ ಸಮಾಜದ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ‘ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ನಮ್ಮ ಸವಿತಾ ಸಮಾಜದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಕ್ಕೆ ಬಂದ ಮೇಲೆ ನಮ್ಮ ಸಮಾಜಕ್ಕೆ ಗೌರವ ಸಿಕ್ಕಿದೆ. ಸವಿತಾ ಸಮಾಜದ ಬಂಧುಗಳು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪಾಟೀಲರ ಆಯ್ಕೆ ಮಾಡಬೇಕು‘ ಎಂದು ಮನವಿ ಮಾಡಿದರು.

ಸವಿತಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಭಾಸ್ಕರ್ ಮಾತನಾಡಿದರು.

ADVERTISEMENT

ಪರಶುರಾಮ, ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶನ ನಾಗರಾಜ ಗಸ್ತಿ, ಭೀಮೇಶ ಗುಂಜಳ್ಳಿ, ಸಾಮ್ರಾಟ್ ಮಂಜು, ಮುನಿರಾಜ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.