ಬಸಾಪುರ (ಕವಿತಾಳ): ‘ರಾಜ್ಯದಲ್ಲಿ ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲಾ ಜಾತಿ ಜನಾಂಗದವರ ಏಳಿಗೆಗೆ ಪ್ರಾಮುಖ್ಯತೆ ನೀಡಿದ್ದಾರೆ’ ಎಂದು ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ ಹೇಳಿದರು.
ಬಸಾಪುರ ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ‘ಸಮುದಾಯಕ್ಕೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರಿಗೆ ಮತ ನೀಡುವಂತೆ’ ಮನವಿ ಮಾಡಿದರು.
ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ, ತಾಲ್ಲೂಕು ಪಂಚಾಯಿತಿ ಸದಸ್ಯ ಶಿವಕುಮಾರ ಮಿಟ್ಟಿಮನಿ, ಮುಖಂಡರಾದ ಬಸವರಾಜ ವಕೀಲ, ವೆಂಕಟೇಶ, ಹುಚ್ಚಪ್ಪ ಸೈದಾಪುರ, ಯಲ್ಲಪ್ಪ, ಯಮನಪ್ಪ, ಬಸವರಾಜ, ಶಂಕರಪ್ಪ, ಸೂಗಪ್ಪ, ನಾಗರಾಜ, ಸತೀಶ, ಹನುಮೇಶ, ಪಂಪಣ್ಣ, ಪರಸಪ್ಪ, ದೊಡ್ಡ ಹುಚ್ಚಪ್ಪ, ದೇವರಾಜ ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.