ಮಸ್ಕಿ (ರಾಯಚೂರು ಜಿಲ್ಲೆ): ಕಬ್ಬಿಣದ ಸರಳು ತುಂಬಿದ್ದಲಾರಿ ಮಗುಚಿಅದರ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಅಂತರಗಂಗಿ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಮೃತ ಚಾಲಕ ಮುದಗಲ್ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಹೆಸರು ತಿಳಿದು ಬಂದಿಲ್ಲ.
ಬೆಳಗಾವಿಯಿಂದ ಬಳ್ಳಾರಿ ಕಡೆಗೆ ಲಾರಿ ಹೊರಟಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿ ಸಬ್ ಇನ್ಸ್ಪೆಕ್ಟರ್ ಸಿದ್ಧರಾಮ ಬಿದರಾಣಿ ಮತ್ತು ಪೋಲಿಸರು ಎರಡು ಜೆಸಿಬಿ ಯಂತ್ರಗಳ ಸಹಾಯದಿಂದ ಲಾರಿಯ ಅಡಿಯಲ್ಲಿ ಸಿಲುಕಿದ್ದ ಚಾಲಕನ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ.
ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.