ADVERTISEMENT

ಉದ್ಯೋಗ ಖಾತ್ರಿ ಕಾಮಗಾರಿ ಪರಿಶೀಲಿಸಿದ ಸಚಿವ ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 13:24 IST
Last Updated 4 ಜೂನ್ 2020, 13:24 IST
ರಾಯಚೂರು ತಾಲ್ಲೂಕಿನ ಗಾಣಧಾಳ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಗುರುವಾರ ಪರಿವೀಕ್ಷಿಸಿದರು
ರಾಯಚೂರು ತಾಲ್ಲೂಕಿನ ಗಾಣಧಾಳ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಗುರುವಾರ ಪರಿವೀಕ್ಷಿಸಿದರು   

ರಾಯಚೂರು: ತಾಲ್ಲೂಕಿನ ಗಾಣದಾಳ, ಬಿಚ್ಚಾಲಿ, ಯರಗೇರಾ, ನೆಲಹಾಳ, ಚಿಕ್ಕಸುಗೂರುಗಳಿಗೆ ಭೇಟಿ ನೀಡಿ ಗ್ರಾಮಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಪರಿಶೀಲಿಸಿದರು.

ಗಾಣದಾಳದಲ್ಲಿ ರೈತರ ಜಮೀನುಗಳಲ್ಲಿ ನಿರ್ಮಿಸುತ್ತಿರುವ ಕೃಷಿಹೊಂಡ ಕಾಮಗಾರಿ ಹಾಗೂ ಬಿಚ್ಚಾಲಿಯಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದರು.

ಮಾರ್ಗಮಧ್ಯೆ ಮಂತ್ರಾಲಯ, ಪಂಚಮುಖಿ ಹಾಗೂ ಬಿಚ್ಚಾಲಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮೀಜಿ ಅವರ ಬೃಂದಾವನಗಳ ದರ್ಶನ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.