ADVERTISEMENT

ಮಂತ್ರಾಲಯದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 3:42 IST
Last Updated 19 ಫೆಬ್ರುವರಿ 2021, 3:42 IST
ಮಂತ್ರಾಲಯದ ಮಠದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ
ಮಂತ್ರಾಲಯದ ಮಠದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ    

ರಾಯಚೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಬೆಳಗಿನ ಜಾವ ಮಂತ್ರಾಲಯಕ್ಕೆ ಬಂದಿದ್ದು, ಶ್ರೀರಾಘವೇಂದ್ರ ಸ್ವಾಮಿ ವೃಂದಾವನ ದರ್ಶನ ಮಾಡಿಕೊಂಡು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಗೆ ನಮಸ್ಕರಿಸಿದರು.

ಆನಂತರ ಕೆಲಕಾಲ ಕುಶಲೋಪರಿ ಮಾತುಕತೆ ನಡೆಯಿತು. ರಾಯಚೂರು ಜಿಲ್ಲಾ ಬಿಜೆಪಿ ಕೆಲವು ಕಾರ್ಯಕರ್ತರು ಜೊತೆಗಿದ್ದರು.

10 ಗಂಟೆಗೆ ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.