ADVERTISEMENT

ಅಧಿಕಾರಿಗಳೊಂದಿಗೆ ಡಿಸಿಎಂ ಲಕ್ಷ್ಮಣ‌‌ ಸವದಿ ಆನ್‌ಲೈನ್ ಸಭೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 6:58 IST
Last Updated 23 ಏಪ್ರಿಲ್ 2021, 6:58 IST
ಸಚಿವ ಲಕ್ಷ್ಮಣ ಸವದಿ
ಸಚಿವ ಲಕ್ಷ್ಮಣ ಸವದಿ   

ರಾಯಚೂರು: ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಬೆಂಗಳೂರಿನಿಂದ ಆನ್‌ಲೈನ್ಮೂಲಕ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಶುಕ್ರವಾರ ಸಭೆ ಆರಂಭಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದು, ವಿಡಿಯೊ ಸಂವಾದ ಮಾಡುತ್ತಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ವಿಸಿ ಹಾಲ್‌ನಲ್ಲಿಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಡಿಸಿಎಂ ಅವರಿಗೆ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ವಿವರ ಮಾಹಿತಿ ನೀಡಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸೀಫ್, ಎಸ್ಪಿ ಪ್ರಕಾಶ್ ನಿಕ್ಕಂ, ಎಡಿಸಿ ದುರುಗೇಶ್, ಡಿಎಚ್ಒ ಡಾ. ರಾಮಕೃಷ್ಣ, ತಹಶಿಲ್ದಾರ್, ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಇದ್ದರು.

ವಿಡಿಯೊ ಸಂವಾದದಲ್ಲಿ ರಾಯಚೂರು ಶಾಸಕರಾದ ಡಾ. ಶಿವರಾಜ ಪಾಟೀಲ್, ರಾಜಾ ವೆಂಕಟಪ್ಪ ನಾಯಕ, ಸಂಸದರಾದ ರಾಜಾ ಅಮರೇಶ್ವರ ನಾಯಕ, ಕರಡಿ ಸಂಗಣ್ಣ, ಜಿಲ್ಲೆ, ಎಲ್ಲಾ ತಾಲ್ಲೂಕುಗಳ ಅಧಿಕಾರಿಗಳು ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.