ಕವಿತಾಳ: ಪಟ್ಟಣಕ್ಕೆ ಭಾನುವಾರ ಆಗಮಿಸಿದ ಸಚಿವ ಎನ್.ಎಸ್.ಬೋಸರಾಜು ಅವರಿಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು.
ಇಲ್ಲಿನ ಶಿವಪ್ಪತಾತನ ಮಠದ ಹತ್ತಿರ ಜಮಾಯಿಸಿದ್ದ ಕಾರ್ಯಕರ್ತರು ಸಚಿವರ ಆಗಮನದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು ಮತ್ತು ಸಚಿವರ ಪರ ಘೋಷಣೆ ಕೂಗಿದರು.
ಶಾಸಕ ಜಿ.ಹಂಪಯ್ಯ ನಾಯಕ, ಜಿಲ್ಲಾ ಪಂಚಾಯಿತಿ ಸದಸ್ಯ ಕಿರಲಿಂಗಪ್ಪ, ಮಾಜಿ ಸದಸ್ಯ ಮಾಳಪ್ಪ, ಪಟ್ಟಣ ಪಂಚಾಯಿತಿ ಸದಸ್ಯ ಅಮರೇಶ, ಮಾಜಿ ಸದಸ್ಯ ಎಡಿಎಂ ಅಕ್ಬರ್, ಮುಖಂಡರಾದ ಶಿವಣ್ಣ ವಕೀಲ, ಒವಣ್ಣ, ಹನುಮಂತ, ಜಾವೀದ್, ಅಯ್ಯಪ್ಪ ತೋಳ ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.