ADVERTISEMENT

ಅಧಿಕಾರಿ ವಿರುದ್ಧ ಶಾಸಕ ಆಕ್ರೋಶ!

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2019, 15:53 IST
Last Updated 15 ಅಕ್ಟೋಬರ್ 2019, 15:53 IST

ರಾಯಚೂರು:ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಮಾನ್ವಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಿತು. ‘ಗುತ್ತಿಗೆದಾರರು ಜೆಡಿಎಸ್‌ ಕಾರ್ಯಕರ್ತರಾಗಿದ್ದಾರೆ’ ಎಂದು ಪಂಚಾಯತ್‌ರಾಜ್‌ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರಸ್ತಾಪಿಸುತ್ತಿದ್ದಂತೆ ಶಾಸಕ ರಾಜಾ ವೆಂಕಟಪ್ಪ ನಾಯಕ ಆಕ್ರೋಶದಿಂದ ಎದ್ದು ನಿಂತರು.

‘ಅವರೇಕೆ ಜೆಡಿಎಸ್‌ ಕಾರ್ಯಕರ್ತರಾಗುತ್ತಾರೆ’ ಎಂದು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಕುಳಿತ ಜಾಗದಿಂದ ಅಧಿಕಾರಿ ಕಡೆಗೆ ಬೆರಳು ಮಾಡಿ ಮಾತನಾಡಿದ ವಿಡಿಯೋ ದೃಶ್ಯಾವಳಿಗಳು ಸೆರೆಯಾಗಿವೆ. ಆಸನದಲ್ಲಿ ಕುಳಿತ ನಂತರವೂ ಆಕ್ರೋಶದಿಂದ ಅಧಿಕಾರಿಗೆ ಎಚ್ಚರಿಕೆ ನೀಡುತ್ತಿದ್ದ ದೃಶ್ಯಾವಳಿಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT