ಸಿರವಾರ: ‘ನಾನು ಶಾಸಕನಾದ ನಂತರ ಪಟ್ಟಣದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ತೋರಿಸಿ ಮತ ಪಡೆದು ಪಟ್ಟಣ ಪಂಚಾಯಿತಿ ಅಧಿಕಾರ ಹಿಡಿಯಿರಿ’ ಎಂದು ಶಾಸಕ ರಾಜಾವೆಂಕಟಪ್ಪ ನಾಯಕ ಹೇಳಿದರು.
ಇಲ್ಲಿನ ಸಜ್ಜಲಶ್ರೀ ಮಠದ ಆವರಣದಲ್ಲಿ ಪಟ್ಟಣ ಪಂಚಾಯಿತಿ ಚುನಾವಣೆ ಅಂಗವಾಗಿ ಭಾನುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,‘ಪಟ್ಟಣದಲ್ಲಿ ಕಳೆದ 20 ವರ್ಷಗಳಲ್ಲಿ ಆಗದ ಕೆಲಸಗಳನ್ನು ಕೇವಲ ಮೂರು ವರ್ಷಗಳಲ್ಲಿ ಮಾಡಿ ತೋರಿಸಿದ್ದೇನೆ. ಪಟ್ಟಣದ ಮುಖ್ಯ ರಸ್ತೆಯಲ್ಲಿನ ವಿಭಜಕ, ಬೀದಿ ದೀಪ, ಪಟ್ಟಣದ ಕ್ರೀಡಾಂಗಣಕ್ಕೆ ಅನುದಾನ ಮಂಜೂರು, ನೂತನ ಬಸ್ ನಿಲ್ದಾಣ ಕಾಮಗಾರಿಗೆ ಟೆಂಡರ್ ಮುಗಿದಿದ್ದು, ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಶಾಸಕರ ಅನುದಾನದಲ್ಲಿ ಪ್ರತಿ ವಾರ್ಡ್ನಲ್ಲೂ ಸಿ.ಸಿ.ರಸ್ತೆ ಕಾಮಗಾರಿಗಳನ್ನು ಮಾಡಲಾಗಿದೆ’ ಎಂದರು.
ಪ್ರತಿ ವಾರ್ಡ್ಗೂ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಿದ್ದು, ಎಲ್ಲ ವಾರ್ಡ್ಗಳಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು.
ಜೆಡಿಎಸ್ ಜಿಲ್ಲಾ ಘಟದ ಅಧ್ಯಕ್ಷ ಎಂ.ವಿರುಪಾಕ್ಷ , ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಯೂಸುಫ್ ಖಾನ್, ಜಿಲ್ಲಾ ಕಾರ್ಯಾಧ್ಯಕ್ಷ ಎನ್.ಶಿವಶಂಕರ ವಕೀಲ, ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಜಂಬುನಾಥ ಯಾದವ್, ರಾಜ್ಯ ಜೆಡಿಎಸ್ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ತಾಲ್ಲೂಕು ಘಟಕದ ಅದ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ಮುಖಂಡರಾದ ಅತ್ತನೂರು ಮಹಾಂತೇಶ ಪಾಟೀಲ, ಶಶಿ ಜಿ.ಲೋಕರೆಡ್ಡಿ, ನಾಗರಾಜಗೌಡ, ವಿಜಯಲಕ್ಷ್ಮಿ, ಖಲೀಲ ಖುರೇಷಿ, ಎಂ.ಡಿ. ಇಸ್ಮಾಯಿಲ್, ಈಶಪ್ಪ ಹೂಗಾರ್, ಕಾಶಿನಾಥ ಸರೋದ್,ದಾನಪ್ಪ , ಗೋಪಾಲ ನಾಯಕ ಹರವಿ, ಸೇರಿದಂತೆ ಚುನಾವಣೆ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.