ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿಯಲ್ಲಿ 35 ದಿನಗಳ ಅವಧಿಯಲ್ಲಿ ₹ 3.73 ಕೋಟಿ ದೇಣಿಗೆ ಸಂಗ್ರಹವಾಗಿದೆ.
ಅಕ್ಟೋಬರ್ 31ರಂದು ಮಠದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹುಂಡಿ ತೆರೆದು ಎಣಿಕೆ ನಡೆಸಿದಾಗ
₹3,62,27,720 ನಗದು, ₹ 10,82,290 ನಾಣ್ಯಗಳು ಸೇರಿ
₹ 3,73,10,010 ಹಣ, 60 ಗ್ರಾಂ ಚಿನ್ನ ಹಾಗೂ 1396 ಗ್ರಾಂ ಬೆಳ್ಳಿ ದೇಣಿಗೆ ರೂಪದಲ್ಲಿ ಬಂದಿದೆ ಎಂದು ಮಠದ ವ್ಯವಸ್ಥಾಪಕ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.