ಮಸ್ಕಿ: ಪಟ್ಟಣದ ಸೋಮನಾಥ ನಗರದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮಳೆ ನೀರು ನಿಂತು ಪಾಚಿಗಟ್ಟಿದ್ದ ಸ್ಥಳವನ್ನು ಪುರಸಭೆ ಸಿಬ್ಬಂದಿ ಸ್ವಚ್ಛ ಮಾಡಿದರು. ಸೋಮವಾರ ಬೆಳಿಗ್ಗೆ ನೀರು ತೆರವು ಮಾಡಲಾಯಿತು.
ಶಾಲಾ ಆವರಣದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ಇಡೀ ಆವರಣ ಪಾಚಿಗಟ್ಟಿ ಸೊಳ್ಳೆಗಳ ಉತ್ಪತ್ತಿ ತಾಣವಾಗಿತ್ತು. ಈ ಕುರಿತು ‘ಪ್ರಜಾವಾಣಿ’ ಯ ಸೋಮವಾರದ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಆದ್ದರಿಂದ ತಹಶೀಲ್ದಾರ್ ಕವಿತಾ.ಆರ್ ಅವರು ಸ್ವಚ್ಛ ಮಾಡಿಸುವಂತೆ ಪುರಸಭೆ ಅಧಿಕಾರಿಗಳಿಗೆ ಸೂಚಿಸಿದ್ದರು. ಎಚ್ಚೆತ್ತ ಅಧಿಕಾರಿಗಳು ಸಿಬ್ಬಂದಿಯಿಂದ ಆವರಣ ಸ್ವಚ್ಛ ಮಾಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.