ಸಿರುಗುಪ್ಪ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಇಬ್ಬರು ಸೋದರಳಿಯಂದಿರು ತಮ್ಮ ಮಾವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದ ಜಮೀನಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಗ್ರಾಮದ ನಿವಾಸಿ ವಿರೂಪಾಕ್ಷಗೌಡ (48) ಕೊಲೆಯಾದವರು. ಅವರ ಅಕ್ಕನ ಮಕ್ಕಳಾದ ಮಲ್ಲಿಕಾರ್ಜುನ ಗೌಡ ಮತ್ತು ಸಿದ್ದಬಸವನಗೌಡ ಪೊಲೀಸರಿಗೆ ರಾತ್ರಿಯೇ ಶರಣಾಗಿದ್ದಾರೆ
ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿಷಯವಾಗಿ ವಿರೂಪಾಕ್ಷಗೌಡ ಹಾಗೂ ಅವರ ಸಹೋದರಿ ನಡುವಿನ ವಿವಾದ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ.
ಸಿರುಗುಪ್ಪ ಪೊಲೀಸ್ ಠಾಣೆಯ ಸಿಪಿಐ ನೇತೃತ್ವದ ಸಿಬ್ಬಂದಿ ಬಂಡ್ರಾಳು ಗ್ರಾಮಕ್ಕೆ ತೆರಳಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.