ADVERTISEMENT

ದೇವಸ್ಥಾನದಲ್ಲಿ ನಮಸ್ಕರಿಸುತ್ತಿದ್ದ ವೇಳೆ ಕತ್ತು ಕೊಯ್ದು ಕೊಲೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2020, 7:19 IST
Last Updated 24 ಆಗಸ್ಟ್ 2020, 7:19 IST

ರಾಯಚೂರು: ತಾಲ್ಲೂಕಿನ ಪುಚ್ಚಲದಿನ್ನಿ ಗ್ರಾಮದಲ್ಲಿ ಪಕ್ಕದ ಮನೆಯ ವ್ಯಕ್ತಿಯು ದೇವಸ್ಥಾನದಲ್ಲಿ ನಮಸ್ಕರಿಸುತ್ತಿದ್ದ ವೇಳೆ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ನಂದಯ್ಯ ಸ್ವಾಮಿ (40) ಕೊಲೆಗೀಡಾಗಿದ್ದು, ಪತ್ನಿ ಹಾಗೂ ಮೂವರ ಮಕ್ಕಳ ರೋದನ ಮುಗಿಲು ಮುಟ್ಟಿದೆ.
ಕೊಲೆ ಮಾಡಿರುವ ಚನ್ನಯ್ಯ ಸ್ವಾಮಿಯನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿಹಾಕಿ ಇಡಪನೂರು ಠಾಣೆ ಪೊಲೀಸರಿಗೆ ಸುದ್ದಿ ತಲುಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚನ್ನಯ್ಯಸ್ವಾಮಿ‌ ಮಾನಸಿಕ ಅಸ್ವಸ್ಥನಾಗಿದ್ದು, ಕೊಲೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT