ರಾಯಚೂರು: ಬಿಜೆಪಿ ಹಿರಿಯ ಮುಖಂಡ ಎನ್.ಶಂಕ್ರಪ್ಪ ಅವರನ್ನು ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ.
ಕೇಂದ್ರ ಸರ್ಕಾರ ಸ್ವಾಮ್ಯದ ಭಾರತೀಯ ಉಕ್ಕು ಪ್ರಾಧಿಕಾರ ನಿಗಮ (ಸೇಲ್)ಕ್ಕೆ ಒಂದೂವರೆ ವರ್ಷದಿಂದ ನಿರ್ದೇಶಕರೂ ಆಗಿದ್ದಾರೆ. 2011ರಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಡಿ.ವಿ. ಸದಾನಂದಗೌಡ ಅವರಿಗೆ ಬಿಟ್ಟುಕೊಟ್ಟಿದ್ದರು. ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.