ರಾಯಚೂರು: ಜಿಲ್ಲೆಯಲ್ಲಿ ಕೆಲವೆಡೆ ಹೆಸರು/ ಉದ್ದು ಬೆಳೆಯಲ್ಲಿ ತುಕ್ಕು (ತಾಮ್ರ) ರೋಗಬಾಧೆ ಕಂಡು ಬಂದಿದ್ದು, ರೋಗ ನಿಯಂತ್ರಣಕ್ಕೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆಯ ಪ್ರಭಾರ ಜಂಟಿ ನಿರ್ದೇಶಕ ಜಯಪ್ರಕಾಶ ತಿಳಿಸಿದ್ದಾರೆ.
ಬಾಧೆಯ ಲಕ್ಷಣಗಳು: ಮೊದಲು ಎಲೆಗಳ ಕೆಳಭಾಗದಲ್ಲಿ ಕಂದು ಬಣ್ಣದ ಚುಕ್ಕೆಯ ಲಕ್ಷಣಗಳು ಕಂಡುಬಂದು ನಂತರ ಎಲೆಯ ಎಲ್ಲ ಭಾಗಗಳಲ್ಲಿ ಆವರಿಸಿ, ನಂತರ ಬೆಳೆ ಸುಟ್ಟಂತಾಗುತ್ತದೆ.
ರೋಗ ನಿರ್ವಹಣೆಗೆ ಹೆಕ್ಸಾಕೊನಝೋಲ್ 1 ಮಿ.ಲೀ + ಎನ್.ಪಿ.ಕೆ. 19:19:19 @ 10ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಿ. ಅಗತ್ಯವಿದ್ದಲ್ಲಿ ಇದೇ ಸಿಂಪರಣೆಯನ್ನು 15 ದಿವಸದ ನಂತರ ಮತ್ತೊಮ್ಮೆ ಸಿಂಪಡಣೆ ಮಾಡಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಜಂಟಿ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.