ADVERTISEMENT

ರಾಯಚೂರು: ಬೀನ್ಸ್ ₹120, ಡೊಣಮೆಣಸಿನಕಾಯಿ ₹80

ತರಕಾರಿ ಮಾರುಕಟ್ಟೆಯಲ್ಲಿ ಇಳಿಕೆ ಕಂಡ ಈರುಳ್ಳಿ, ಬೆಳ್ಳುಳ್ಳಿ ದರ

ಚಂದ್ರಕಾಂತ ಮಸಾನಿ
Published 5 ಮೇ 2025, 5:00 IST
Last Updated 5 ಮೇ 2025, 5:00 IST
ರಾಯಚೂರಿನ ಉಸ್ಮಾನಿಯಾ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸುತ್ತಿರುವ ಗ್ರಾಹಕರು/ ಚಿತ್ರ: ಶ್ರೀನಿವಾಸ ಇನಾಂದಾರ್
ರಾಯಚೂರಿನ ಉಸ್ಮಾನಿಯಾ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸುತ್ತಿರುವ ಗ್ರಾಹಕರು/ ಚಿತ್ರ: ಶ್ರೀನಿವಾಸ ಇನಾಂದಾರ್   

ರಾಯಚೂರು: ಜಿಲ್ಲೆಯಲ್ಲಿ ರಣ ಬಿಸಿಲು ಮುಂದುವರಿದಿದೆ. ಹೀಗಾಗಿ ಜಿಲ್ಲೆಯ ಜನ ಹೊರ ಜಿಲ್ಲೆಗಳ ತರಕಾರಿಯನ್ನೇ ಅವಲಂಬಿಸಬೇಕಾಗಿದೆ. ಬಿಸಿಲೂರಿಗೆ ಕಡಿಮೆ ಪ್ರಮಾಣದಲ್ಲಿ ತರಕಾರಿ ಆವಕವಾಗಿರುವ ಕಾರಣ ಪ್ರಮುಖ ತರಕಾರಿ ಬೆಲೆ ತುಸು ಹೆಚ್ಚಳವಾಗಿದೆ.

ಬೇಸಿಗೆ ಕಾರಣ ಎಳೆ ಸೌತೆಕಾಯಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಚಿಕ್ಕಗಾತ್ರದ ಉದ್ದನೆಯ ಸೌತೆಕಾಯಿಯನ್ನು ಗ್ರಾಹಕರು ಕೇಳಿ ಖರೀದಿಸುತ್ತಿದ್ದಾರೆ. ಮಹಿಳೆಯರು ಮಳೆಗಾಲದಲ್ಲಿ ಚೀಪ್ಸ್‌ ಸವಿಯಲು ಕಳೆದ ವಾರ ಬೆಲೆ ಕಡಿಮೆ ಇದ್ದ ಕಾರಣ ಅಧಿಕ ಪ್ರಮಾಣದಲ್ಲಿ ಆಲೂಗಡ್ಡೆ ಖರೀದಿಸಿದ್ದರು. ಬೇಡಿಕೆ ಹೆಚ್ಚಾದ ಕಾರಣ ಸ್ಪಲ್ಪ ಬೆಲೆ ಏರಿದೆ.

ಪ್ರತಿ ಕ್ವಿಂಟಲ್‌ಗೆ ಮೆಣಸಿನಕಾಯಿ, ಹೂಕೋಸು, ಗಜ್ಜರಿ, ಬೀಟ್‌ರೂಟ್‌, ಬೀನ್ಸ್, ಹಿರೇಕಾಯಿ, ಬೆಂಡೆಕಾಯಿ, ತೊಂಡೆಕಾಯಿ, ಡೊಣಮೆಣಸಿನಕಾಯಿ, ಚವಳೆಕಾಯಿ, ಸೌತೆಕಾಯಿ ₹ 2 ಸಾವಿರ, ‌ಆಲೂಗಡ್ಡೆ, ಎಲೆಕೋಸು ₹ 1 ಸಾವಿರ ಹೆಚ್ಚಾಗಿದೆ.

ADVERTISEMENT

ತುಪ್ಪದ ಹಿರೇಕಾಯಿ ಬೆಲೆ ಮಾತ್ರ ಮಾರುಕಟ್ಟೆಯಲ್ಲಿ ಸ್ಥಿರವಾಗಿದೆ. ಪ್ರತಿ ಕ್ವಿಂಟಲ್‌ಗೆ ಬೆಳ್ಳುಳ್ಳಿ ₹ 2 ಸಾವಿರ, ಬದನೆಕಾಯಿ, ಟೊಮೆಟೊ ₹1 ಸಾವಿರ, ಈರುಳ್ಳಿ ₹500 ಕಡಿಮೆಯಾಗಿದೆ.

ಮಹಾರಾಷ್ಟ್ರದ ನಾಸಿಕ್‌ನಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಎಂದಿನಂತೆ ಬೆಳಗಾವಿ ಜಿಲ್ಲೆಯಿಂದ ಹಸಿ ಮೆಣಸಿನಕಾಯಿ, ಕೊತಂಬರಿ, ಮೆಂತೆ ಸೊಪ್ಪು ಬಂದಿದೆ. ನೆರೆಯ ಜಿಲ್ಲೆ ಹಾಗೂ ರಾಯಚೂರು ಗ್ರಾಮೀಣ ಪ್ರದೇಶದಿಂದ ಹಿರೇಕಾಯಿ, ಗಜ್ಜರಿ, ಅವರೆಕಾಯಿ, ಸೋರೆಕಾಯಿ, ಸೌತೆಕಾಯಿ, ಎಲೆಕೋಸು, ಹೂಕೋಸು ಇಲ್ಲಿಯ ತರಕಾರಿ ಸಗಟು ಮಾರುಕಟ್ಟೆಗೆ ಬಂದಿದೆ.

‘ಬೆಳಗಾವಿ, ತೆಲಂಗಾಣದ ಹಾಗೂ ಆಂಧ್ರಪ್ರದೇಶದ ಕೆಲ ಜಿಲ್ಲೆಗಳಿಂದ ತರಕಾರಿ ರಾಯಚೂರು ಮಾರುಕಟ್ಟೆಗೆ ಬಂದಿದೆ. ಬಿಸಿಲು ಜಾಸ್ತಿ ಇರುವ ಕಾರಣ ಪ್ರಮುಖ ತರಕಾರಿ ಬೆಲೆಯಲ್ಲಿ ಹೆಚ್ಚಳವಾಗಿದೆ’ ಎಂದು ತರಕಾರಿ ವ್ಯಾಪಾರಿ ರಾಜು ಹೇಳುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.