ರಾಯಚೂರು: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಹತೋಟಿಗೆ ತರುವ ಕಾರಣಕ್ಕಾಗಿ ಜಿಲ್ಲೆಯಿಂದ ಹೊರ ರಾಜ್ಯಕ್ಕೆ ಸಂಪರ್ಕಿಸುವ ಎಲ್ಲ ಅಂತರರಾಜ್ಯ ಸರ್ಕಾರಿ ಬಸ್ ಮತ್ತು ಇತರ ವಾಹನಗಳ ಪ್ರವೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.
ಗ್ರಾಮೀಣ ಭಾಗದಿಂದ ಹಾಗೂ ನಗರಗಳಲ್ಲಿ ತುರ್ತು ಕೆಲಸದ ಹೊರತಾಗಿ ಜನರು ಹೊರಬರುವುದನ್ನು ನಿಷೇಧಿಸಲಾಗಿದೆ. ಕೇವಲ ಅತಿ ಅಗತ್ಯ ದಿನಸಿ ವಸ್ತುಗಳನ್ನು ಮತ್ತು ತುರ್ತು ವೈದ್ಯಕೀಯ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಮಾತ್ರ ನಗರವ್ಯಾಪ್ತಿಯಲ್ಲಿ ಸಂಚರಿಸಲು ಅನುಮತಿ ಇದೆ. ಇದನ್ನು ಉಲ್ಲಂಘಿಸಿದರೆ ಸಾರ್ವಜನಿಕರು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.