ADVERTISEMENT

ಕೃಷ್ಣಾ ನದಿ ಪ್ರವಾಹ ಯಥಾಸ್ಥಿತಿ

ಅನಾರೋಗ್ಯಪೀಡಿತ ಮಕ್ಕಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2019, 20:15 IST
Last Updated 14 ಆಗಸ್ಟ್ 2019, 20:15 IST

ರಾಯಚೂರು/ಯಾದಗಿರಿ: ಕೃಷ್ಣಾ ನದಿ ಪ್ರವಾಹದಿಂದ ಸಂಪರ್ಕ ಕಡಿದುಕೊಂಡಿರುವ ಯಳಗುಂದಿ ನಡುಗಡ್ಡಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಮೂವರು ಮಕ್ಕಳನ್ನು ಬೋಟ್‌ಗಳಲ್ಲಿ ಕರೆತಂದು ರಾಯಚೂರುಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.

ಎನ್‌ಡಿಆರ್‌ಎಫ್‌ ತಂಡದವರು ಈ ಮಕ್ಕಳು ಹಾಗೂ ಅವರ ಪಾಲಕರನ್ನು ಬೋಟ್‌ಗಳಲ್ಲಿ ಕರೆತಂದರು.

ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 5.86 ಲಕ್ಷ ಕ್ಯುಸೆಕ್‌ ನೀರು ಬಿಡುತ್ತಿದ್ದು, ಯಾದಗಿರಿ, ರಾಯಚೂರು ಜಿಲ್ಲೆಗಳ ಈ ನದಿ ತೀರದಲ್ಲಿ ಪ್ರವಾಹ ಸ್ಥಿತಿ ಇನ್ನೂ ಯಥಾಸ್ಥಿತಿಯಲ್ಲಿದೆ.

ADVERTISEMENT

ಕಲಬುರ್ಗಿಯಲ್ಲಿ ಬುಧವಾರ ರಾತ್ರಿ ಉತ್ತಮ ಮಳೆ ಸುರಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.