ADVERTISEMENT

ಪ್ರಧಾನಿ ನರೇಂದ್ರ ಮೋದಿ ಜೊತೆ ಸಂವಾದ–‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2019, 11:00 IST
Last Updated 24 ಜನವರಿ 2019, 11:00 IST
ರಾಘವೇಂದ್ರ ಗೊಂಚಕಾರ್
ರಾಘವೇಂದ್ರ ಗೊಂಚಕಾರ್   

ಮಾನ್ವಿ: ದೆಹಲಿಯಲ್ಲಿ ಜ. 29ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮ ನಡೆಯಲಿದೆ. ತಾಲ್ಲೂಕಿನ ನೀರಮಾನ್ವಿ ಗ್ರಾಮದ ಆರ್‌ಎಂಎಸ್‌ಎ ಆದರ್ಶ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿ ರಾಘವೇಂದ್ರ ಗೊಂಚಕಾರ್ ಹಾಗೂ ಪಾಲಕರ ಪ್ರತಿನಿಧಿಯಾಗಿ 10ನೇ ತರಗತಿ ವಿದ್ಯಾರ್ಥಿನಿ ಚಂದನಾ ಬಾಗೋಡಿ ಅವರ ತಂದೆ ಚಂದ್ರಶೇಖರ ಬಾಗೋಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ ಎಂದು ಶಾಲೆ ಮುಖ್ಯಶಿಕ್ಷಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.