ADVERTISEMENT

‘ಪಕ್ಷ ಸಂಘಟನೆಗೆ ಕೈಜೋಡಿಸಿ’

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 3:52 IST
Last Updated 18 ಆಗಸ್ಟ್ 2021, 3:52 IST
ಸಿಂಧನೂರಿನ ಕನಕದಾಸ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿದರು
ಸಿಂಧನೂರಿನ ಕನಕದಾಸ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿದರು   

ಸಿಂಧನೂರು: ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಕರೆ ನೀಡಿದರು.

ಸ್ಥಳೀಯ ಕನಕದಾಸ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣಾ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ಪಕ್ಷ ಟಿಕೆಟ್ ನೀಡುವವರನ್ನು ಎಲ್ಲರೂ ಒಗ್ಗಟ್ಟಾಗಿ ನಿಂತು ಗೆಲ್ಲಿಸುವುದು ಜವಾಬ್ದಾರಿಯಾಗಿದೆ. ಯಾವುದೇ ರೀತಿ ಭಿನ್ನಾಭಿಪ್ರಾಯಕ್ಕೆ ಒಳಗಾಗಬಾರದು‘ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಮಾಜಿ ಸದಸ್ಯ ಎನ್.ಶಿವನಗೌಡ ಗೊರೇಬಾಳ ಮಾತನಾಡಿದರು.

ಜಿಲ್ಲಾ ಘಟಕದ ಉಪಾಧ್ಯಕ್ಷ ಮಧ್ವರಾಜ್ ಆಚಾರ್, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಮರೇಶ ರೈತನಗರ, ಗ್ರಾಮೀಣ ಮಂಡಲದ ಅಧ್ಯಕ್ಷ ಟಿ.ಹನುಮೇಶ ಸಾಲಗುಂದಾ, ನಗರ ಮಂಡಲ ಅಧ್ಯಕ್ಷೆ ಪ್ರೇಮಾ ಸಿದ್ದಾಂತಿಮಠ, ಪರಮೇಶಪ್ಪ ದಢೇಸುಗೂರು, ಎಂ.ದೊಡ್ಡಬಸವರಾಜ, ಲಿಂಗರಾಜ ಹಲಗಿ, ಶಿವಬಸನಗೌಡ ಗೊರೇಬಾಳ, ವೆಂಕಟೇಶ ಉಪ್ಪಾರ, ಯುವ ಮೋರ್ಚಾ ಅಧ್ಯಕ್ಷ ಸಿದ್ದು ಹೂಗಾರ, ನಗರ ಯುವ ಮೋರ್ಚಾ ಅಧ್ಯಕ್ಷ ರವಿಕುಮಾರ ಉಪ್ಪಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.