ADVERTISEMENT

ರಾಜಕೀಯದಲ್ಲಿ ದೇಶಪ್ರೇಮ ಬಳಕೆ: ದಿನೇಶ ಗುಂಡೂರಾವ್‌

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2019, 13:37 IST
Last Updated 21 ಏಪ್ರಿಲ್ 2019, 13:37 IST
ದಿನೇಶ್‌ ಗುಂಡೂರಾವ್‌
ದಿನೇಶ್‌ ಗುಂಡೂರಾವ್‌   

ಸಿಂಧನೂರು (ರಾಯಚೂರು): ಜನರ ದೇಶಪ್ರೇಮವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೇಯಕೃತ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹರಿಹಾಯ್ದರು.

ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಕೊಪ್ಪಳ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸಾಧನೆಗಳ ಬಗ್ಗೆ ಮಾತನಾಡುತ್ತಿಲ್ಲ. ಕಳೆದ ಐದು ವರ್ಷಗಳಲ್ಲಿ ಶೂನ್ಯ ಸಾಧನೆ ಮಾಡಿದ್ದಾರೆ. ಪಾಕಿಸ್ತಾನ ಬಗ್ಗೆ ಮಾತನಾಡುತ್ತಾರೆ. ದೇಶಭಿಮಾನವನ್ನು ಪ್ರಶ್ನಿಸುವ ಕೆಲಸ ಮಾಡುತ್ತಿದ್ದಾರೆ. ದೇಶಪ್ರೇಮ ಪ್ರಶ್ನಿಸಲು ಮೋದಿ ಯಾರು? ಬಿಜೆಪಿಗೆ ಮತ ನೀಡದಿದ್ದರೆ ಜನರು ದೇಶದ್ರೋಹಿಗಳಾಗುತ್ತಾರಾ ಎಂದು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.