ADVERTISEMENT

ಧರ್ಮ ಒಡೆಯುವವರಿಗೆ ತಕ್ಕಪಾಠ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 13:50 IST
Last Updated 16 ಏಪ್ರಿಲ್ 2019, 13:50 IST
   

ರಾಯಚೂರು: ‘ಧರ್ಮ ಒಡೆಯುವ ಮೂಲಕ ಯಡಿಯೂರಪ್ಪನನ್ನು ಮುಖ್ಯಮಂತ್ರಿ ಆಗದಂತೆ ಮಾಡಿದವರು ಪಾಠ ಕಲ್ತಿದ್ದಾರೆ. ಈ ಚುನಾವಣೆಯಲ್ಲೂ ಧರ್ಮ ಒಡೆಯುವವರಿಗೆ ವೀರಶೈವ ಲಿಂಗಾಯತರು ತಕ್ಕಪಾಠ ಕಲಿಸಲಿದ್ದಾರೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಸಿರವಾರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.

ವೀರಶೈವ ಲಿಂಗಾಯತ ವಿಚಾರವಾಗಿ ಸಚಿವ ಎಂ.ಬಿ. ಪಾಟೀಲ ಅವರು ಸೋನಿಯಾಗಾಂಧಿಗೆ ಬರೆದ ಪತ್ರ ಬಹಿರಂಗವಾಗಿದೆ. ಈಗ ಧರ್ಮ ಒಡೆದು ರಾಜಕಾರಣ ಮಾಡಲು ಹೊರಟಿದ್ದಾರೆ. ಸಚಿವ ಡಿ. ಕೆ. ಶಿವಕುಮಾರ ಈಗ ತಪ್ಪಾಗಿದೆ ಎಂದು ಹೇಳುತ್ತಿದ್ದಾರೆ ಎಂದರು.

ADVERTISEMENT

‘ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರಿಗೆ ಕವಡೆ ಕಾಸಿನ ಕಿಮ್ಮಿತ್ತಿಲ್ಲ. ಜನರು ಕಟ್ಟಿರುವ ತೆರಿಗೆ ಹಣದಲ್ಲಿ ₹150 ಕೋಟಿ ಚುನಾವಣೆಗೆ ವೆಚ್ಚ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಸಿಎಂ ಸ್ಥಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮಂಡ್ಯದಲ್ಲಿ ಷಡ್ಯಂತ್ರ ರೂಪಿಸಿ ಪುತ್ರನನ್ನು ಗೆಲ್ಲಿಸಲು ಹೊರಟಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.