ADVERTISEMENT

ಆಕಾಶವಾಣಿ: ನೇರ ಫೋನ್‌ ಇನ್‌ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 9 ಜೂನ್ 2019, 13:13 IST
Last Updated 9 ಜೂನ್ 2019, 13:13 IST

ರಾಯಚೂರು:ಆಕಾಶವಾಣಿ ರಾಯಚೂರು ಕೇಂದ್ರವು ಜೂನ್‌ 10 ರಂದುಸಂಜೆ 6 ಗಂಟೆ 50 ನಿಮಿಷದಿಂದ 7 ಗಂಟೆ 35 ನಿಮಿಷದವರೆಗೆ ರಾಯಚೂರು ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಇರುವ ಅವಕಾಶಗಳು ಮತ್ತು ತೋಟಗಾರಿಕಾ ಇಲಾಖೆಯ ಯೋಜನೆಗಳ ಕುರಿತು ನೇರ ಫೋನ್-ಇನ್ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ.

ಈ ಕಾರ್ಯಕ್ರಮದಲ್ಲಿ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಹಮದ ಅಲಿ ಅವರು ಭಾಗವಹಿಸಿ ರಾಯಚೂರು ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಇರುವ ಅವಕಾಶಗಳು ಮತ್ತು ತೋಟಗಾರಿಕಾ ಇಲಾಖೆಯ ಯೋಜನೆಗಳ ಕುರಿತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

ಕೇಳುಗರು ಹಾಗೂ ರೈತ ಬಾಂಧವರು ಆಕಾಶವಾಣಿ ದೂರವಾಣಿ ಸಂಖ್ಯೆ 223178 ಅಥವಾ 223365 ಇವುಗಳಿಗೆ ಕರೆಮಾಡಿ ರಾಯಚೂರು ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಇರುವ ಅವಕಾಶಗಳು ಮತ್ತು ತೋಟಗಾರಿಕಾ ಇಲಾಖೆಯ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ADVERTISEMENT

ರಾಯಚೂರು ತಾಲ್ಲೂಕಿನ ಹೊರಗಡೆಯಿಂದ ಕರೆಮಾಡುವವರು ಎಸ್.ಟಿ.ಡಿ. ಕೋಡ್ ಸಂಖ್ಯೆ 08532 ಬಳಸಿ ಕರೆ ಮಾಡಬೇಕು ಎಂದುರಾಯಚೂರು ಆಕಾಶವಾಣಿ ಕೇಂದ್ರದಕೃಷಿಕಾರ್ಯಕ್ರಮ ನಿರ್ವಾಹಕಡಾ.ವ್ಹಿ.ಜಿ.ಬಾವಲತ್ತಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.