ADVERTISEMENT

ನೇರ ಫೋನ್ ಇನ್ ಕಾರ್ಯಕ್ರಮ ಮೇ 2 ರಂದು

​ಪ್ರಜಾವಾಣಿ ವಾರ್ತೆ
Published 1 ಮೇ 2019, 14:44 IST
Last Updated 1 ಮೇ 2019, 14:44 IST

ರಾಯಚೂರು: ರಾಯಚೂರು ಆಕಾಶವಾಣಿ ಕೇಂದ್ರವು ಮೇ 2 ರಂದು ಸಂಜೆ 6 ಗಂಟೆ 50 ನಿಮಿಷದಿಂದ 7 ಗಂಟೆ 35 ನಿಮಿಷದವರೆಗೆ ಜಿಲ್ಲೆಯಲ್ಲಿ ಬಿ.ಟಿ.ಹತ್ತಿಯಲ್ಲಿ ಗುಲಾಬಿ ಕಾಯಿ ಕೊರೆಕದ ನಿರ್ವಹಣೆಗೆ ರೈತರು ತೆಗೆದುಕೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳ ಕುರಿತು ನೇರ ಫೋನ್-ಇನ್ ಕಾರ್ಯಕ್ರಮ ಪ್ರಸಾರ ಮಾಡಲಿದೆ.

ರಾಯಚೂರು ಕೃಷಿ ಮಹಾವಿದ್ಯಾಲಯದ ಕೀಟ ತಜ್ಞ ಡಾ. ಎ.ಜಿ. ಶ್ರೀನಿವಾಸ ಹಾಗೂ ಕುರ್ಡಿ ಗ್ರಾಮದ ಪ್ರಗತಿಪರ ರೈತ ವೆಂಕಟೇಶ ರೆಡ್ಡಿ ಅವರು ಭಾಗವಹಿಸಿ ಗುಲಾಬಿ ಕಾಯಿ ಕೊರೆಕದ ನಿರ್ವಹಣೆಗೆ ರೈತರು ತೆಗೆದುಕೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳ ಕುರಿತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸುವರು.

ಕೇಳುಗರು ಹಾಗೂ ರೈತ ಬಾಂಧವರು ಆಕಾಶವಾಣಿ ದೂರವಾಣಿ ಸಂಖ್ಯೆ 08532– 223178 ಅಥವಾ 223365 ಇವುಗಳಿಗೆ ಕರೆಮಾಡಿ ಜಿಲ್ಲೆಯಲ್ಲಿ ಬಿ.ಟಿ.ಹತ್ತಿಯಲ್ಲಿ ಗುಲಾಬಿ ಕಾಯಿ ಕೊರೆಕದ ನಿರ್ವಹಣೆಗೆ ರೈತರು ತೆಗೆದುಕೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ADVERTISEMENT

ಜಿಲ್ಲೆಯ ಕೇಳುಗರು ಹಾಗೂ ರೈತ ಬಾಂಧವರು ಈ ಕಾರ್ಯಕ್ರಮದ ಪ್ರಯೋಜನ ಪಡೆಯಲು ರಾಯಚೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮದ ಮುಖ್ಯಸ್ಥ ಡಾ. ವಿ.ಜಿ. ಬಾವಲತ್ತಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.