ADVERTISEMENT

ಕಳ್ಳನ ಬಂಧನ: ಚಿನ್ನಾಭರಣ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2019, 15:11 IST
Last Updated 19 ಮಾರ್ಚ್ 2019, 15:11 IST
ರಾಯಚೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿರುವ ತೆಲಂಗಾಣದ ನಾರಾಯಣಪೇಟೆಯ ಆರೋಪಿ ಮತ್ತು ವಶಕ್ಕೆ ಪಡೆದಿರುವ ಚಿನ್ನಾಭರಣಗಳು
ರಾಯಚೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿರುವ ತೆಲಂಗಾಣದ ನಾರಾಯಣಪೇಟೆಯ ಆರೋಪಿ ಮತ್ತು ವಶಕ್ಕೆ ಪಡೆದಿರುವ ಚಿನ್ನಾಭರಣಗಳು   

ರಾಯಚೂರು: ತಾಲ್ಲೂಕಿನ ವಿವಿಧೆಡೆ ಕಳ್ಳತನ ಮಾಡುತ್ತಿದ್ದ ತೆಲಂಗಾಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತನಿಂದ ₹3.29 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಪದಿಪಾಡು ಗ್ರಾಮದ ಲಕ್ಷ್ಮಿಕಾಂತ ನಾಯಕ ಬಂಧಿತ ಆರೋಪಿ. ಗ್ರಾಮೀಣ ಠಾಣೆ ಮತ್ತು ಯರಗೇರಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಶೋಧ ಕಾರ್ಯದಲ್ಲಿ ತೊಡಗಿದ್ದರು. ಇನ್ನು ಇಬ್ಬರು ಆರೋಪಿಗಳಾದ ಮಲ್ಲೇಶ ನಾಯಕ, ಗೋಪಾಲ ನಾಯಕ ತಲೆಮರೆಸಿಕೊಂಡಿದ್ದು, ಶೋಧ ಮುಂದುವರಿಸಲಾಗಿದೆ ಎಂದು ತಿಳಿಸಲಾಗಿದೆ.

ಸಿಪಿಐ ದತ್ತಾತ್ರೇಯ ಕಾರ್ನಾಡ್‌, ಸಿಪಿಐ ಅಂದಾರಾಯಣ್ಣ, ಪಿಎಸ್‌ಐ ನಿಂಗಪ್ಪ, ಪಿಎಸ್‌ಐ ಜಗದೀಶ ತನಿಖಾ ತಂಡದಲ್ಲಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.