ರಾಯಚೂರು: ವಾರದ ಲಾಕ್ಡೌನ್ ವೇಳೆ ಅನಗತ್ಯವಾಗಿ ಸಂಚರಿಸಿದ ಬೈಕ್ ಸವಾರರಿಂದ ಪೊಲೀಸರು ಒಂದೇ ದಿನದಲ್ಲಿ ಒಟ್ಟು ₹78,700 ದಂಡ ಸಂಗ್ರಹಿಸಿದ್ದಾರೆ.
ಭಾನುವಾರದ ಲಾಕ್ ಡೌನ್ ವೇಳೆ ಅಗತ್ಯ ವಸ್ತುಗಳು, ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಅನವಶ್ಯಕವಾಗಿ ವಾಹನ ಸವಾರರು ಸಂಚರಿಸಿದ್ದಾರೆ. ಇದರಿಂದ ಪೊಲೀಸರು ಜಿಲ್ಲೆಯಲ್ಲಿ ಒಟ್ಟು 484 ಬೈಕ್ ಸವಾರ ವಿರುದ್ದ ಪ್ರಕರಣ ದಾಖಲಿಸಿ ಬೈಕ್ಗಳನ್ನು ವಶ ಪಡಿಸಿಕೊಂಡಿದ್ದಾರೆ. ಅಲ್ಲದೇ ಬೈಕ್ ಸವಾರರಿಂದ ದಂಡ ವಸೂಲಿ ಮಾಡಿದ್ದಾರೆ.
‘ಭಾನುವಾರ ಒಂದು ದಿನ ಲಾಕ್ ಡೌನ್ ಜಾರಿಗೊಳಿಸಿತ್ತು. ಈ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗಿತ್ತು. ಮುಂದಿನ ಭಾನುವಾರವು ಸಹ ಇದೇ ರೀತಿ ಸಂಪೂರ್ಣ ಬಂದ್ ಮಾಡಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹರಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.