ADVERTISEMENT

ಪೊಲೀಸ್ ಕಾನ್‍ಸ್ಟೆಬಲ್ ಪತ್ನಿ ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 29 ಮೇ 2021, 16:55 IST
Last Updated 29 ಮೇ 2021, 16:55 IST
   

ಸಿಂಧನೂರು: ಹೊಟ್ಟೆ ನೋವು ತಾಳಲಾರದೆ ಪೊಲೀಸ್ ಕಾನ್‍ಸ್ಟೆಬಲ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಮಹಿಬೂಬಿಯಾ ಕಾಲೊನಿಯಲ್ಲಿರುವ ಪೊಲೀಸ್ ವಸತಿ ಗೃಹದಲ್ಲಿ ಶನಿವಾರ ಬೆಳಗಿನ ಜಾವ
ನಡೆದಿದೆ.

ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯ ಸೋಮನಾಥ ರಾಠೋಡ್ ಅವರ ಪತ್ನಿ ಕವಿತಾ (40) ಮೃತ ದುರ್ದೈವಿ. ಪತಿ ರಾತ್ರಿ ಸಮಯದಲ್ಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದರು. ಹೊಟ್ಟೆನೋವು ತಾಳಲಾರದೆ ಬೆಳಗಿನ 4.30ರ ಸುಮಾರಿಗೆ ಬೆಡ್ ರೂಮ್‍ನಲ್ಲಿರುವ ಫ್ಯಾನ್‍ಗೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂತರ ಈ ದೃಶ್ಯವನ್ನು ಇಬ್ಬರು ಪುತ್ರರು ನೋಡಿ ಗಾಬರಿಗೊಂಡು ವಿಷಯ ತಿಳಿಸಿದ್ದರಿಂದ ತಂದೆ ಸೋಮನಾಥ ಮನೆಗೆ ಬಂದಿದ್ದಾರೆ.

ಬೆಳಿಗ್ಗೆ 10 ಗಂಟೆ ಸುಮಾರಿಗೆ ಶಹರ ಪೊಲೀಸ್ ಠಾಣೆಯ ಸಬ್‍ಇನ್ಸ್‌ಪೆಕ್ಟರ್ ವಿಜಯಕೃಷ್ಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡರು. ನಂತರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತ ಮಹಿಳೆಯ ತಂದೆ ತಿಮ್ಮಣ್ಣ ನೀಡಿದ ದೂರಿನ ಮೇರೆಗೆ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.