ಕವಿತಾಳ (ರಾಯಚೂರು ಜಿಲ್ಲೆ): ಸಮೀಪದ ಚಿಂಚರಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಬಿಸಿಯೂಟದ ಪಡಿತರ ಪೂರೈಕೆ ಮಾಡಲಾಗಿದೆ.
‘ಬಿಸಿಯೂಟಕ್ಕೆ ಪಡಿತರ ಪೂರೈಕೆ ಸ್ಥಗಿತ’ ಶೀರ್ಷಿಕೆಯಡಿ ‘ಪ್ರಜಾವಾಣಿ’ ಸೆ.14ರ ಸಂಚಿಕೆಯಲ್ಲಿ ಪ್ರಕಟವಾಗಿದ್ದ ವರದಿಗೆ ಸ್ಪಂದಿಸಿದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಭಾಕರ, ಪಡಿತರ ಪೂರೈಕೆಗೆ ಕ್ರಮ ಕೈಗೊಂಡಿದ್ದಾರೆ.
‘ವಾರದಿಂದ ಸಮಸ್ಯೆ ಉಂಟಾಗಿತ್ತು. 4 ದಿನದಿಂದ ಸ್ಥಳೀಯರೇ ಪಡಿತರ ನೀಡಿದ್ದರು. ವರದಿ ಆಧರಿಸಿ ಅಧಿಕಾರಿಗಳು ಕ್ರಮವಹಿಸಿದ್ದಾರೆ’ ಎಂದು ಎಸ್ಡಿಎಂಸಿ ಅಧ್ಯಕ್ಷ ಮುದೆಪ್ಪ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.